‘ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಶಾಲೆಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡುವ ಭರವಸೆ ಕೊಟ್ಟಿದ್ದರು. ಆದರೆ, ಅದು ಈಡೇರಿಲ್ಲ. ಎಂಜಿನಿಯರ್ ಮೂಲಕ ಮನವಿ ಮಾಡಿದರೂ ಕೆಲಸ ಆರಂಭವಾಗಿಲ್ಲ. ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗೆ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ಶ್ರೀಶೈಲ ಗುಡೋಡಗಿ ದೂರಿದರು.