ಪ್ರಾಚಾರ್ಯ ಡಾ.ಸಿ.ಎನ್. ನಾಯ್ಕರ ಮಾತನಾಡಿ, ‘ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡುವ ಧ್ಯೇಯೋದ್ದೇಶವಿದೆ. ಪಾಲಕರು ಮಕ್ಕಳಿಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಮಾತ್ರ ನೀಡಬೇಕು. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕಂತೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದು ತಿಳಿಸಿದರು.