<p><strong>ಬೆಳಗಾವಿ</strong>: ‘ಕ್ಯಾನ್ಸರ್ ಮಾರಕ ರೋಗ ಎಂದು ಎಲ್ಲರೂ ಭಯ ಪಡುತ್ತಾರೆ. ಆದರೆ, ಭಯ ಬೀಳುವ ಅಗತ್ಯವಿಲ್ಲ. ಸೂಕ್ತ ಸಮಯದಲ್ಲಿ ವೈದ್ಯರ ಸಲಹೆ ಹಾಗೂ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಶೀಘ್ರ ಗುಣವಾಗುತ್ತದೆ’ ಎಂದು ಡಾ.ಅಕ್ಷಯ ಮೆಟಗುಡ್ಡ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಇಲ್ಲಿನ ಮಹಾಂತ ಭವನದಲ್ಲಿ ಸೋಮವಾರ ಆಯೋಜಿಸಿದ್ದ ವಿಜ್ಞಾನ ಉಪನ್ಯಾಸ, ಪ್ರಶಸ್ತಿ ಪ್ರದಾನ, ದತ್ತಿ ಉಪನ್ಯಾಸ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ನಿವೃತ್ತ ನ್ಯಾಯಾಧೀಶ ರಾಜಶೇಖರ ಶೆಟ್ಟರ, ‘ಎಲ್ಲರಿಗೂ ಕಾನೂನು ಅರಿವು ಅವಶ್ಯವಾಗಿದೆ. ಸಂಕಷ್ಟದ ಸಮಯದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.</p>.<p>ಡಾ.ಸಾತ್ವಿಕ ಮೆಟಗುಡ್ಡ ಅವರು ಉದರದರ್ಶಕ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ನೀಡಿ, ‘ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹಿರಿಯ ಸಾಹಿತಿ ನೀಲಗಂಗಾ ಚರಂತಿಮಠ, ‘ವಿಜ್ಞಾನ ಸಾಹಿತ್ಯ ಕನ್ನಡದಲ್ಲಿ ಹೆಚ್ಚು ಹೆಚ್ಚು ಮೂಡಿಬರಬೇಕು. ನಮ್ಮ ಕನ್ನಡ ಭಾಷೆ ಉಳಿಸಿ, ಬೆಳೆಸುವಂತಹ ಕೆಲಸವಾಗಬೇಕು’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮಾತನಾಡಿ, ‘ಮಹಿಳೆಯರ ಜೀವ ಅಗ್ಗದ ವಸ್ತುವಿನಂತಾಗಿದೆ ಹಾಗೂ ಇಂದು ಸಮಾಜದಲ್ಲಿ ಮಹಿಳೆಯರು ಬದುಕದಂತಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಹಿರಿಯ ಸಾಹಿತಿ ಶಾಂತಾದೇವಿ ಬಣಕಾರ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಸಾಹಿತಿ ಅನ್ನಪೂರ್ಣಾ ಕನೋಜ ಅವರಿಗೆ ‘ಬಣಕಾರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ನಿವೃತ್ತ ನ್ಯಾಯಾಧೀಶ ರಾಜಶೇಖರ ಶೆಟ್ಟರ, ಡಾ.ಅಕ್ಷಯ ಮೆಟಗುಡ್ಡ, ಡಾ.ಸಾತ್ವಿಕ ಮೆಟಗುಡ್ಡ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತ ಪಡೆದ ನೀಲಗಂಗಾ ಚರಂತಿಮಠ, ಬಣಕಾರ ಪ್ರಶಸ್ತಿ ವಿಜೇತೆ ಅನ್ನಪೂರ್ಣಾ ಕನೋಜ, ಡಾ.ವನಿತಾ ಮೆಟಗುಡ್ಡ, ಪ್ರಾಚಾರ್ಯ ಡಾ.ನಿರ್ಮಲಾ ಬಟ್ಟಲ ಅವರನ್ನು ಸನ್ಮಾನಿಸಲಾಯಿತು.</p>.<p>ಸಾಹಿತಿಗಳಾದ ಬಸವರಾಜ ಸಸಾಲಟ್ಟಿ, ಶ್ರೀರಂಗ ಜೋಶಿ, ವಿಜಯ ಬಡಿಗೇರ, ಹೇಮಾ ಸೊನೊಳ್ಳಿ ಇದ್ದರು.</p>.<p>ಕಸಾಪ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವೈ. ಮೆಣಸಿನಕಾಯಿ ಸ್ವಾಗತಿಸಿದರು. ಜಯಶೀಲಾ ಬ್ಯಾಕೋಡ ನಿರೂಪಿಸಿದರು. ಜ್ಯೋತಿ ಬದಾಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕ್ಯಾನ್ಸರ್ ಮಾರಕ ರೋಗ ಎಂದು ಎಲ್ಲರೂ ಭಯ ಪಡುತ್ತಾರೆ. ಆದರೆ, ಭಯ ಬೀಳುವ ಅಗತ್ಯವಿಲ್ಲ. ಸೂಕ್ತ ಸಮಯದಲ್ಲಿ ವೈದ್ಯರ ಸಲಹೆ ಹಾಗೂ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಶೀಘ್ರ ಗುಣವಾಗುತ್ತದೆ’ ಎಂದು ಡಾ.ಅಕ್ಷಯ ಮೆಟಗುಡ್ಡ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಇಲ್ಲಿನ ಮಹಾಂತ ಭವನದಲ್ಲಿ ಸೋಮವಾರ ಆಯೋಜಿಸಿದ್ದ ವಿಜ್ಞಾನ ಉಪನ್ಯಾಸ, ಪ್ರಶಸ್ತಿ ಪ್ರದಾನ, ದತ್ತಿ ಉಪನ್ಯಾಸ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ನಿವೃತ್ತ ನ್ಯಾಯಾಧೀಶ ರಾಜಶೇಖರ ಶೆಟ್ಟರ, ‘ಎಲ್ಲರಿಗೂ ಕಾನೂನು ಅರಿವು ಅವಶ್ಯವಾಗಿದೆ. ಸಂಕಷ್ಟದ ಸಮಯದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.</p>.<p>ಡಾ.ಸಾತ್ವಿಕ ಮೆಟಗುಡ್ಡ ಅವರು ಉದರದರ್ಶಕ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ನೀಡಿ, ‘ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹಿರಿಯ ಸಾಹಿತಿ ನೀಲಗಂಗಾ ಚರಂತಿಮಠ, ‘ವಿಜ್ಞಾನ ಸಾಹಿತ್ಯ ಕನ್ನಡದಲ್ಲಿ ಹೆಚ್ಚು ಹೆಚ್ಚು ಮೂಡಿಬರಬೇಕು. ನಮ್ಮ ಕನ್ನಡ ಭಾಷೆ ಉಳಿಸಿ, ಬೆಳೆಸುವಂತಹ ಕೆಲಸವಾಗಬೇಕು’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮಾತನಾಡಿ, ‘ಮಹಿಳೆಯರ ಜೀವ ಅಗ್ಗದ ವಸ್ತುವಿನಂತಾಗಿದೆ ಹಾಗೂ ಇಂದು ಸಮಾಜದಲ್ಲಿ ಮಹಿಳೆಯರು ಬದುಕದಂತಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಹಿರಿಯ ಸಾಹಿತಿ ಶಾಂತಾದೇವಿ ಬಣಕಾರ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಸಾಹಿತಿ ಅನ್ನಪೂರ್ಣಾ ಕನೋಜ ಅವರಿಗೆ ‘ಬಣಕಾರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ನಿವೃತ್ತ ನ್ಯಾಯಾಧೀಶ ರಾಜಶೇಖರ ಶೆಟ್ಟರ, ಡಾ.ಅಕ್ಷಯ ಮೆಟಗುಡ್ಡ, ಡಾ.ಸಾತ್ವಿಕ ಮೆಟಗುಡ್ಡ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತ ಪಡೆದ ನೀಲಗಂಗಾ ಚರಂತಿಮಠ, ಬಣಕಾರ ಪ್ರಶಸ್ತಿ ವಿಜೇತೆ ಅನ್ನಪೂರ್ಣಾ ಕನೋಜ, ಡಾ.ವನಿತಾ ಮೆಟಗುಡ್ಡ, ಪ್ರಾಚಾರ್ಯ ಡಾ.ನಿರ್ಮಲಾ ಬಟ್ಟಲ ಅವರನ್ನು ಸನ್ಮಾನಿಸಲಾಯಿತು.</p>.<p>ಸಾಹಿತಿಗಳಾದ ಬಸವರಾಜ ಸಸಾಲಟ್ಟಿ, ಶ್ರೀರಂಗ ಜೋಶಿ, ವಿಜಯ ಬಡಿಗೇರ, ಹೇಮಾ ಸೊನೊಳ್ಳಿ ಇದ್ದರು.</p>.<p>ಕಸಾಪ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವೈ. ಮೆಣಸಿನಕಾಯಿ ಸ್ವಾಗತಿಸಿದರು. ಜಯಶೀಲಾ ಬ್ಯಾಕೋಡ ನಿರೂಪಿಸಿದರು. ಜ್ಯೋತಿ ಬದಾಮಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>