<p><strong>ಬೆಳಗಾವಿ</strong>: ‘ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ.ಯಲ್ಲಿ ವಿವಿಧ ಇಲಾಖೆಗಳಿಗೆ ನಿಗದಿಪಡಿಸಿದ ಗುರಿ ಸಾಧಿಸದ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಇಲಾಖೆಗಳು ಕಾಮಗಾರಿಗಳನ್ನು ಕೈಗೊಳ್ಳುವ ಬದಲು ನಿಯಮಾವಳಿಗಳನ್ನು ಪಾಲಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತಹ ಅಗತ್ಯ ಸಾಮಗ್ರಿಗಳನ್ನು ಖರೀದಿಸುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಒಂದು ವೇಳೆ ಅರ್ಹ ಫಲಾನುಭವಿಗಳನ್ನು ಲಭ್ಯವಿಲ್ಲದಿದ್ದರೆ ವಂತಿಕೆ ಹಣ, ವಸತಿನಿಲಯಗಳಿಗೆ ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಖರ್ಚು ವೆಚ್ಚ ಭರಿಸುವುದು ಮೊದಲಾದ ಚಟುವಟಿಕೆಗಳಿಗೆ ಅನುದಾನ ಉಪಯೋಗಿಸಬೇಕು’ ಎಂದು ತಿಳಿಸಿದರು.</p>.<p class="Subhead"><strong>ನೋಟಿಸ್ ನೀಡಲು ಸೂಚನೆ</strong></p>.<p>‘ನಿಗದಿತ ಗುರಿ ಸಾಧಿಸದ ನೀರಾವರಿ ಇಲಾಖೆ, ಹೆಸ್ಕಾಂ ಹಾಗೂ ಬಿಮ್ಸ್ನ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು’ ಎಂದು ಸೂಚಿಸಿದರು.</p>.<p>‘ಅನುದಾನ ಸಮರ್ಪಕ ಬಳಕೆಗೆ ಅನುಕೂಲ ಆಗುವಂತೆ ಪರ್ಯಾಯ ಯೋಜನೆಗಳನ್ನು ರೂಪಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಮಹಾನಗರ ಪಾಲಿಕೆ ಹಾಗೂ ಕೆಲ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಕಡಿಮೆಯಾಗಿದೆ. ಒಂದು ವೇಳೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭಗೊಂಡಿದ್ದರೆ ತ್ವರಿತವಾಗಿ ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದರು.</p>.<p class="Subhead"><strong>ಆಂಬುಲೆನ್ಸ್ ಖರೀದಿ</strong></p>.<p>‘ಬಿಡುಗಡೆಯಾದ ಅನುದಾನದಲ್ಲಿ ಎಸ್.ಸಿ.ಪಿ.ಯಲ್ಲಿ ಶೇ.93.34 ಮತ್ತು ಟಿ.ಎಸ್.ಪಿ.ಯಲ್ಲಿ ಶೇ.93.14 ಪ್ರಗತಿ ಸಾಧಿಸಲಾಗಿದೆ. ಟಿ.ಎಸ್.ಪಿ.ಯಲ್ಲಿ ಬಾಕಿ ಉಳಿದ ಅನುದಾನದಲ್ಲಿ ಎಸ್.ಟಿ. ಮೀಸಲು ಕ್ಷೇತ್ರದ ವ್ಯಾಪ್ತಿಯಲ್ಲಿನ ಜನರಿಗೆ ಅನುಕೂಲವಾಗುವಂತೆ ಆಂಬುಲೆನ್ಸ್ ಖರೀದಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ‘ಕೆಲವು ತಾಲ್ಲೂಕುಗಳಲ್ಲಿ ನಿಗದಿತ ಜನಸಂಖ್ಯೆ ಕಡಿಮೆ ಇರುವುದರಿಂದ ಪ್ರಗತಿಯ ದರದಲ್ಲಿ ಇಳಿಕೆ ಕಂಡುಬಂದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಭೌತಿಕ ಪ್ರಗತಿ ಸಾಧನೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಚರ್ಚೆ ನಡೆಸಿ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ.ಯಲ್ಲಿ ವಿವಿಧ ಇಲಾಖೆಗಳಿಗೆ ನಿಗದಿಪಡಿಸಿದ ಗುರಿ ಸಾಧಿಸದ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಇಲಾಖೆಗಳು ಕಾಮಗಾರಿಗಳನ್ನು ಕೈಗೊಳ್ಳುವ ಬದಲು ನಿಯಮಾವಳಿಗಳನ್ನು ಪಾಲಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತಹ ಅಗತ್ಯ ಸಾಮಗ್ರಿಗಳನ್ನು ಖರೀದಿಸುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಒಂದು ವೇಳೆ ಅರ್ಹ ಫಲಾನುಭವಿಗಳನ್ನು ಲಭ್ಯವಿಲ್ಲದಿದ್ದರೆ ವಂತಿಕೆ ಹಣ, ವಸತಿನಿಲಯಗಳಿಗೆ ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಖರ್ಚು ವೆಚ್ಚ ಭರಿಸುವುದು ಮೊದಲಾದ ಚಟುವಟಿಕೆಗಳಿಗೆ ಅನುದಾನ ಉಪಯೋಗಿಸಬೇಕು’ ಎಂದು ತಿಳಿಸಿದರು.</p>.<p class="Subhead"><strong>ನೋಟಿಸ್ ನೀಡಲು ಸೂಚನೆ</strong></p>.<p>‘ನಿಗದಿತ ಗುರಿ ಸಾಧಿಸದ ನೀರಾವರಿ ಇಲಾಖೆ, ಹೆಸ್ಕಾಂ ಹಾಗೂ ಬಿಮ್ಸ್ನ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು’ ಎಂದು ಸೂಚಿಸಿದರು.</p>.<p>‘ಅನುದಾನ ಸಮರ್ಪಕ ಬಳಕೆಗೆ ಅನುಕೂಲ ಆಗುವಂತೆ ಪರ್ಯಾಯ ಯೋಜನೆಗಳನ್ನು ರೂಪಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಮಹಾನಗರ ಪಾಲಿಕೆ ಹಾಗೂ ಕೆಲ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಕಡಿಮೆಯಾಗಿದೆ. ಒಂದು ವೇಳೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭಗೊಂಡಿದ್ದರೆ ತ್ವರಿತವಾಗಿ ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದರು.</p>.<p class="Subhead"><strong>ಆಂಬುಲೆನ್ಸ್ ಖರೀದಿ</strong></p>.<p>‘ಬಿಡುಗಡೆಯಾದ ಅನುದಾನದಲ್ಲಿ ಎಸ್.ಸಿ.ಪಿ.ಯಲ್ಲಿ ಶೇ.93.34 ಮತ್ತು ಟಿ.ಎಸ್.ಪಿ.ಯಲ್ಲಿ ಶೇ.93.14 ಪ್ರಗತಿ ಸಾಧಿಸಲಾಗಿದೆ. ಟಿ.ಎಸ್.ಪಿ.ಯಲ್ಲಿ ಬಾಕಿ ಉಳಿದ ಅನುದಾನದಲ್ಲಿ ಎಸ್.ಟಿ. ಮೀಸಲು ಕ್ಷೇತ್ರದ ವ್ಯಾಪ್ತಿಯಲ್ಲಿನ ಜನರಿಗೆ ಅನುಕೂಲವಾಗುವಂತೆ ಆಂಬುಲೆನ್ಸ್ ಖರೀದಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ‘ಕೆಲವು ತಾಲ್ಲೂಕುಗಳಲ್ಲಿ ನಿಗದಿತ ಜನಸಂಖ್ಯೆ ಕಡಿಮೆ ಇರುವುದರಿಂದ ಪ್ರಗತಿಯ ದರದಲ್ಲಿ ಇಳಿಕೆ ಕಂಡುಬಂದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಭೌತಿಕ ಪ್ರಗತಿ ಸಾಧನೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಚರ್ಚೆ ನಡೆಸಿ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>