<p><strong>ಬೆಳಗಾವಿ: </strong>ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಹಾಗೂ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ಗಡಿಗಳ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನುತೀವ್ರವಾಗಿ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.</p>.<p>‘ಬಾಚಿ/ಶಿನೋಳ್ಳಿ, ರಕ್ಕಸಕೊಪ್ಪ, ಬೆಕ್ಕಿನಕೆರೆ, ಚೆಲುವ್ಯಾನಟ್ಟಿ ಚೆಕ್ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್ ನೆಗೆಟಿವ್ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ಈ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದೆ. ನೆರೆಯ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಸರ್ಕಾರದ ನಿರ್ದೇಶನಂತೆ ಮುಂಜಾಗ್ರತಾ ಕ್ರಮ ವಹಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನನಿಲ್ದಾಣ, ಕಾಕತಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲ ಚೆಕ್ಪೋಸ್ಟ್ ತೆರೆಯಲಾಗಿದೆ. ಕೋವಿಡ್ ನೆಗೆಟಿವ್ ವರದಿ (ಆರ್ಟಿಪಿಸಿಆರ್) ಇರಬೇಕು ಅಥವಾ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇರಬೇಕು. ಇಲ್ಲವಾದಲ್ಲಿ ಅಂಥವರಿಗೆ ಪ್ರವೇಶ ಕೊಡುತ್ತಿಲ್ಲ’ ಎಂದಮು ತಿಳಿಸಿದ್ದಾರೆ.</p>.<p>‘ಆರೋಗ್ಯ ಇಲಾಖೆಯ ಸಿಬ್ಬಂದಿಯು ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ. ಪರೀಕ್ಷಯನ್ನೂ (ಆರ್ಎಟಿ) ನಡೆಸಲಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಹಾಗೂ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ಗಡಿಗಳ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನುತೀವ್ರವಾಗಿ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.</p>.<p>‘ಬಾಚಿ/ಶಿನೋಳ್ಳಿ, ರಕ್ಕಸಕೊಪ್ಪ, ಬೆಕ್ಕಿನಕೆರೆ, ಚೆಲುವ್ಯಾನಟ್ಟಿ ಚೆಕ್ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್ ನೆಗೆಟಿವ್ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ಈ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದೆ. ನೆರೆಯ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಸರ್ಕಾರದ ನಿರ್ದೇಶನಂತೆ ಮುಂಜಾಗ್ರತಾ ಕ್ರಮ ವಹಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನನಿಲ್ದಾಣ, ಕಾಕತಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲ ಚೆಕ್ಪೋಸ್ಟ್ ತೆರೆಯಲಾಗಿದೆ. ಕೋವಿಡ್ ನೆಗೆಟಿವ್ ವರದಿ (ಆರ್ಟಿಪಿಸಿಆರ್) ಇರಬೇಕು ಅಥವಾ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇರಬೇಕು. ಇಲ್ಲವಾದಲ್ಲಿ ಅಂಥವರಿಗೆ ಪ್ರವೇಶ ಕೊಡುತ್ತಿಲ್ಲ’ ಎಂದಮು ತಿಳಿಸಿದ್ದಾರೆ.</p>.<p>‘ಆರೋಗ್ಯ ಇಲಾಖೆಯ ಸಿಬ್ಬಂದಿಯು ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ. ಪರೀಕ್ಷಯನ್ನೂ (ಆರ್ಎಟಿ) ನಡೆಸಲಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>