ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಮೊದಲಾದ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಳಗಾವಿ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಅನ್ವಯವಾಗಲಿದೆ. ಇಂದು ಬೆಳಿಗ್ಗೆ 8ರಿಂದ ನಾಳೆ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಗುಂಪುಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.