<p><strong>ಗೋಕಾಕ:</strong> ‘ಮುಂಗಾರು ಹಂಗಾಮಿನಲ್ಲಿ ಕೃಷಿಗೆ ಸಂಬಂಧಪಟ್ಟಂತೆ ಬಿತ್ತನೆಬೀಜ ಮತ್ತು ರಸಗೊಬ್ಬರ ಮೊದಲಾದ ಪರಿಕರಗಳನ್ನು ಕೃಷಿ ಇಲಾಖೆ ಕಲ್ಪಿಸಲಿದ್ದು, ರೈತರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಲಹೆ ನೀಡಿದರು.</p>.<p>ಇಲ್ಲಿನ ತಮ್ಮ ಕಾರ್ಯಾಲಯದ ಆವರಣದಲ್ಲಿ ಭಾನುವಾರ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ, ರೈತರ ಹಿತ ಕಾಪಾಡುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ರಾಜ್ಯದಲ್ಲಿ ಸಾಕಷ್ಟಿದೆ. ಕೊರೊನಾ ತಡೆಗಟ್ಟಲು ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಎಸ್.ಎ. ಕೋತವಾಲ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಮುಂಗಾರು ಹಂಗಾಮಿನಲ್ಲಿ ಕೃಷಿಗೆ ಸಂಬಂಧಪಟ್ಟಂತೆ ಬಿತ್ತನೆಬೀಜ ಮತ್ತು ರಸಗೊಬ್ಬರ ಮೊದಲಾದ ಪರಿಕರಗಳನ್ನು ಕೃಷಿ ಇಲಾಖೆ ಕಲ್ಪಿಸಲಿದ್ದು, ರೈತರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಲಹೆ ನೀಡಿದರು.</p>.<p>ಇಲ್ಲಿನ ತಮ್ಮ ಕಾರ್ಯಾಲಯದ ಆವರಣದಲ್ಲಿ ಭಾನುವಾರ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ, ರೈತರ ಹಿತ ಕಾಪಾಡುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ರಾಜ್ಯದಲ್ಲಿ ಸಾಕಷ್ಟಿದೆ. ಕೊರೊನಾ ತಡೆಗಟ್ಟಲು ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಎಸ್.ಎ. ಕೋತವಾಲ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>