ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಪೊಲೀಸ್ ಅಧಿಕಾರಿಗಳ ಎದುರೇ ಪಿಸ್ತೂಲ್ ತೋರಿಸಿ ಬೆದರಿಸಿದ ವ್ಯಕ್ತಿಗೆ ಮಹಿಳೆಯೊಬ್ಬರು ತನ್ನ ಕರಾಟೆ ಕಲೆಯ ಮೂಲಕ ಮಣ್ಣು ಮುಕ್ಕಿಸಿದರು. ಪಿಸ್ತೂಲ್ ಕಸಿದುಕೊಂಡು ಸ್ವಯಂ ರಕ್ಷಣೆ ಮಾಡಿಕೊಂಡರು. ದಾರಿಯಲ್ಲಿ ಒಬ್ಬಂಟಿಯಾಗಿ ನಡೆದು ಹೋಗುತ್ತಿದ್ದಾಗ ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಯುವತಿಯು ಒದೆ ಕೊಟ್ಟರು.