<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ವಿವಿಧ ವಸತಿನಿಲಯ ಮತ್ತು ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5,825 ವಿದ್ಯಾರ್ಥಿನಿಯರಿಗೆ ಶಿಕ್ಷಣದೊಂದಿಗೆ ಸ್ವರಕ್ಷೆ ಹಾಗೂ ಸುರಕ್ಷೆಗಾಗಿ ‘ಆತ್ಮರಕ್ಷಣಾ ಕಲೆ’ಯನ್ನು ಕಲಿಸಲಾಗುತ್ತಿದೆ.</p>.<p>ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ಕಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅರಂಭಿಸಿರುವ ‘ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸುತ್ತಿದ್ದಾರೆ. ಕರಾಟೆಯ ಪಟ್ಟುಗಳನ್ನು ಕಲಿತುಕೊಂಡು ಆತ್ಮರಕ್ಷಣೆ ಮಾಡಿಕೊಳ್ಳುವ ಆತ್ಮವಿಶ್ವಾಸವನ್ನೂ ಪಡೆದುಕೊಳ್ಳುತ್ತಿದ್ದಾರೆ.</p>.<p>ಈ ಚಟುವಟಿಕೆಯು ಜ.1ರಿಂದಲೇ ಆರಂಭವಾಗಿದೆ. ಜಿಲ್ಲಾ ಮಟ್ಟದ ಅಧಿಕೃತ ಉದ್ಘಾಟನಾ ಕಾರ್ಯಕ್ರಮವು ಫೆ.8ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕರಾಟೆ ಕೌಶಲವನ್ನು ಪ್ರದರ್ಶಿಸಲಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.</p>.<p class="Briefhead">ಏನಿದು ಕಾರ್ಯಕ್ರಮ?</p>.<p>ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿನಿಲಯಗಳ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್)ದ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಕೌಶಲ ತರಬೇತಿ ನೀಡಲಾಗುತ್ತಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ 9 ಹಾಸ್ಟೆಲ್ಗಳ 896 ವಿದ್ಯಾರ್ಥಿನಿಯರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಹಾಸ್ಟೆಲ್ಗಳ 3,540 ವಿದ್ಯಾರ್ಥಿನಿಯರು ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ 17 ವಸತಿಶಾಲೆಗಳ 1,389 ವಿದ್ಯಾರ್ಥಿನಿಯರಿಗೆ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ.</p>.<p>ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಯರು ಈ ವಿಶೇಷ ತರಬೇತಿ ಪಡೆಯಲಿದ್ದಾರೆ. ವಸತಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಹೆಣ್ಣುಮಕ್ಕಳು ಆತ್ಮರಕ್ಷಣಾ ಕಲೆಯನ್ನು ಕರಗತ ಮಾಡಿಕೊಳ್ಳುತ್ತಿದ್ದಾರೆ. ತವಗ ವಸತಿಶಾಲೆಯಲ್ಲಿ ಮಾತ್ರ ಪಿಯುಸಿಯವರೂ ಇದ್ದಾರೆ. ಸಮವಸ್ತ್ರಗಳನ್ನು ಸರ್ಕಾರದಿಂದಲೇ ಉಚಿತವಾಗಿ ಒದಗಿಸಲಾಗಿದೆ.</p>.<p>ಈ ಹಾಸ್ಟೆಲ್ಗಳಿಗೆ ಬಡ, ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಲ್ಲಿ ಕೀಳರಿಮೆ ಹೋಗಲಾಡಿಸಿ ಸ್ಥೈರ್ಯ ತುಂಬುವುದಕ್ಕೆ ಈ ಉಪಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p class="Briefhead">ವಾರದಲ್ಲಿ 2 ತರಗತಿ</p>.<p>‘ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮದಲ್ಲಿ ವಾರದಲ್ಲಿ 2 ದಿನ ತರಬೇತಿ ನಡೆಯುತ್ತಿದೆ. ಬ್ಯಾಚೊಂದರಲ್ಲಿ 50 ವಿದ್ಯಾರ್ಥಿನಿಯರು ಇರುತ್ತಾರೆ. ಒಂದು ತರಬೇತಿ ಅವಧಿಯನ್ನು 60 ನಿಮಿಷಗಳಿಗೆ ನಿಗದಿಪಡಿಸಲಾಗಿದೆ. ಒಟ್ಟು 6 ತಿಂಗಳು ತರಬೇತಿ ನಡೆಯಲಿದ್ದು, 48 ಬೋಧನಾ ಅವಧಿಗಳನ್ನು ನಿಗದಿಪಡಿಸಲಾಗಿದೆ. ಸ್ವಯಂ ರಕ್ಷಣಾ ಕೌಶಲಗಳ ತರಬೇತಿ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರಲ್ಲಿ ಧೈರ್ಯ, ಆತ್ಮಸ್ಥೈರ್ಯ ಮೂಡಿಸುವ ಉದ್ದೇಶ ಹೊಂದಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬ್ಲಾಕ್ ಬೆಲ್ಟ್ ಪಡೆದಿರುವ ತರಬೇತಿದಾರರಿಂದಲೇ ತರಬೇತಿ ಕೊಡಿಸಲಾಗುವುದು. ಅವರಿಗೆ ತರಗತಿ ಒಂದಕ್ಕೆ ₹ 600 ಸಂಭಾವನೆ ನಿಗದಿಪಡಿಸಲಾಗಿದೆ. ಅವರು ಕರಾಟೆಯ ವಿವಿಧ ತಂತ್ರಗಳನ್ನು ಕಲಿಸಿಕೊಡುತ್ತಿದ್ದಾರೆ. ಸರ್ಕಾರದ ಸೂಚನೆ ಪ್ರಕಾರ ಬಹುತೇಕ ಕಡೆ ಮಹಿಳಾ ತರಬೇತುದಾರರನ್ನೇ ನಿಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಇರುವಲ್ಲಿ ಬ್ಯಾಚ್ಗಳನ್ನು ಮಾಡಲಾಗಿದೆ. ಪಠ್ಯದ ಅಭ್ಯಾಸಕ್ಕೆ ತೊಂದರೆ ಆಗದಂತೆ ಕಾರ್ಯಕ್ರಮ ರೂಪಿಸಲಾಗಿದೆ. ಬೆಳಿಗ್ಗೆ ಅಥವಾ ಸಂಜೆ ತರಬೇತಿ ನಡೆಯುತ್ತಿದೆ. ವಿದ್ಯಾರ್ಥಿನಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ವಿದ್ಯಾರ್ಥಿನಿಯರಿಗೆ ಈ ಅವಕಾಶ ಕಲ್ಪಿಸಿಲ್ಲ.</p>.<p class="Subhead"><strong>ಅವರಿಗೂ ಕೆಲಸ</strong></p>.<p>50 ವಿದ್ಯಾರ್ಥಿನಿಯರಿಗೆ ಒಬ್ಬರಂತೆ ಟ್ರೇನರ್ ಆಯ್ಕೆ ಮಾಡಿಕೊಳ್ಳಲಾಗಿದೆ. ಆ ತಾಲ್ಲೂಕಿನವರಿಗೆ ಆದ್ಯತೆ ಕೊಡಲಾಗಿದೆ. ಇದರಿಂದ ಅವರಿಗೂ ಕೆಲಸ ನೀಡಿದಂತಾಗಿದೆ.</p>.<p><em>–ಆರ್.ವೈ. ಗಂಗರಡ್ಡಿ, ಜಿಲ್ಲಾ ಸಮನ್ವಯ ಅಧಿಕಾರಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ</em></p>.<p class="Subhead"><strong>ಜೀವನಕ್ಕೂ ಅನುಕೂಲ</strong></p>.<p>ಹಾಸ್ಟೆಲ್ಗಳಲ್ಲಿ ಸರ್ಕಾರದಿಂದ ಉಚಿತವಾಗಿ ಕಲಿಯುವ ಕಲೆಯು ವಿದ್ಯಾರ್ಥಿನಿಯರ ಮುಂದಿನ ಜೀವನದಲ್ಲೂ ಪ್ರಯೋಜನಕ್ಕೆ ಬರಲಿದೆ.</p>.<p><em>–ಉಮಾ ಸಾಲಿಗೌಡರ, ಜಂಟಿ ನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ವಿವಿಧ ವಸತಿನಿಲಯ ಮತ್ತು ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5,825 ವಿದ್ಯಾರ್ಥಿನಿಯರಿಗೆ ಶಿಕ್ಷಣದೊಂದಿಗೆ ಸ್ವರಕ್ಷೆ ಹಾಗೂ ಸುರಕ್ಷೆಗಾಗಿ ‘ಆತ್ಮರಕ್ಷಣಾ ಕಲೆ’ಯನ್ನು ಕಲಿಸಲಾಗುತ್ತಿದೆ.</p>.<p>ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ಕಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅರಂಭಿಸಿರುವ ‘ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸುತ್ತಿದ್ದಾರೆ. ಕರಾಟೆಯ ಪಟ್ಟುಗಳನ್ನು ಕಲಿತುಕೊಂಡು ಆತ್ಮರಕ್ಷಣೆ ಮಾಡಿಕೊಳ್ಳುವ ಆತ್ಮವಿಶ್ವಾಸವನ್ನೂ ಪಡೆದುಕೊಳ್ಳುತ್ತಿದ್ದಾರೆ.</p>.<p>ಈ ಚಟುವಟಿಕೆಯು ಜ.1ರಿಂದಲೇ ಆರಂಭವಾಗಿದೆ. ಜಿಲ್ಲಾ ಮಟ್ಟದ ಅಧಿಕೃತ ಉದ್ಘಾಟನಾ ಕಾರ್ಯಕ್ರಮವು ಫೆ.8ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕರಾಟೆ ಕೌಶಲವನ್ನು ಪ್ರದರ್ಶಿಸಲಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.</p>.<p class="Briefhead">ಏನಿದು ಕಾರ್ಯಕ್ರಮ?</p>.<p>ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿನಿಲಯಗಳ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್)ದ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಕೌಶಲ ತರಬೇತಿ ನೀಡಲಾಗುತ್ತಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ 9 ಹಾಸ್ಟೆಲ್ಗಳ 896 ವಿದ್ಯಾರ್ಥಿನಿಯರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಹಾಸ್ಟೆಲ್ಗಳ 3,540 ವಿದ್ಯಾರ್ಥಿನಿಯರು ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ 17 ವಸತಿಶಾಲೆಗಳ 1,389 ವಿದ್ಯಾರ್ಥಿನಿಯರಿಗೆ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ.</p>.<p>ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಯರು ಈ ವಿಶೇಷ ತರಬೇತಿ ಪಡೆಯಲಿದ್ದಾರೆ. ವಸತಿ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಹೆಣ್ಣುಮಕ್ಕಳು ಆತ್ಮರಕ್ಷಣಾ ಕಲೆಯನ್ನು ಕರಗತ ಮಾಡಿಕೊಳ್ಳುತ್ತಿದ್ದಾರೆ. ತವಗ ವಸತಿಶಾಲೆಯಲ್ಲಿ ಮಾತ್ರ ಪಿಯುಸಿಯವರೂ ಇದ್ದಾರೆ. ಸಮವಸ್ತ್ರಗಳನ್ನು ಸರ್ಕಾರದಿಂದಲೇ ಉಚಿತವಾಗಿ ಒದಗಿಸಲಾಗಿದೆ.</p>.<p>ಈ ಹಾಸ್ಟೆಲ್ಗಳಿಗೆ ಬಡ, ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಲ್ಲಿ ಕೀಳರಿಮೆ ಹೋಗಲಾಡಿಸಿ ಸ್ಥೈರ್ಯ ತುಂಬುವುದಕ್ಕೆ ಈ ಉಪಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p class="Briefhead">ವಾರದಲ್ಲಿ 2 ತರಗತಿ</p>.<p>‘ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮದಲ್ಲಿ ವಾರದಲ್ಲಿ 2 ದಿನ ತರಬೇತಿ ನಡೆಯುತ್ತಿದೆ. ಬ್ಯಾಚೊಂದರಲ್ಲಿ 50 ವಿದ್ಯಾರ್ಥಿನಿಯರು ಇರುತ್ತಾರೆ. ಒಂದು ತರಬೇತಿ ಅವಧಿಯನ್ನು 60 ನಿಮಿಷಗಳಿಗೆ ನಿಗದಿಪಡಿಸಲಾಗಿದೆ. ಒಟ್ಟು 6 ತಿಂಗಳು ತರಬೇತಿ ನಡೆಯಲಿದ್ದು, 48 ಬೋಧನಾ ಅವಧಿಗಳನ್ನು ನಿಗದಿಪಡಿಸಲಾಗಿದೆ. ಸ್ವಯಂ ರಕ್ಷಣಾ ಕೌಶಲಗಳ ತರಬೇತಿ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರಲ್ಲಿ ಧೈರ್ಯ, ಆತ್ಮಸ್ಥೈರ್ಯ ಮೂಡಿಸುವ ಉದ್ದೇಶ ಹೊಂದಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬ್ಲಾಕ್ ಬೆಲ್ಟ್ ಪಡೆದಿರುವ ತರಬೇತಿದಾರರಿಂದಲೇ ತರಬೇತಿ ಕೊಡಿಸಲಾಗುವುದು. ಅವರಿಗೆ ತರಗತಿ ಒಂದಕ್ಕೆ ₹ 600 ಸಂಭಾವನೆ ನಿಗದಿಪಡಿಸಲಾಗಿದೆ. ಅವರು ಕರಾಟೆಯ ವಿವಿಧ ತಂತ್ರಗಳನ್ನು ಕಲಿಸಿಕೊಡುತ್ತಿದ್ದಾರೆ. ಸರ್ಕಾರದ ಸೂಚನೆ ಪ್ರಕಾರ ಬಹುತೇಕ ಕಡೆ ಮಹಿಳಾ ತರಬೇತುದಾರರನ್ನೇ ನಿಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಇರುವಲ್ಲಿ ಬ್ಯಾಚ್ಗಳನ್ನು ಮಾಡಲಾಗಿದೆ. ಪಠ್ಯದ ಅಭ್ಯಾಸಕ್ಕೆ ತೊಂದರೆ ಆಗದಂತೆ ಕಾರ್ಯಕ್ರಮ ರೂಪಿಸಲಾಗಿದೆ. ಬೆಳಿಗ್ಗೆ ಅಥವಾ ಸಂಜೆ ತರಬೇತಿ ನಡೆಯುತ್ತಿದೆ. ವಿದ್ಯಾರ್ಥಿನಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ವಿದ್ಯಾರ್ಥಿನಿಯರಿಗೆ ಈ ಅವಕಾಶ ಕಲ್ಪಿಸಿಲ್ಲ.</p>.<p class="Subhead"><strong>ಅವರಿಗೂ ಕೆಲಸ</strong></p>.<p>50 ವಿದ್ಯಾರ್ಥಿನಿಯರಿಗೆ ಒಬ್ಬರಂತೆ ಟ್ರೇನರ್ ಆಯ್ಕೆ ಮಾಡಿಕೊಳ್ಳಲಾಗಿದೆ. ಆ ತಾಲ್ಲೂಕಿನವರಿಗೆ ಆದ್ಯತೆ ಕೊಡಲಾಗಿದೆ. ಇದರಿಂದ ಅವರಿಗೂ ಕೆಲಸ ನೀಡಿದಂತಾಗಿದೆ.</p>.<p><em>–ಆರ್.ವೈ. ಗಂಗರಡ್ಡಿ, ಜಿಲ್ಲಾ ಸಮನ್ವಯ ಅಧಿಕಾರಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ</em></p>.<p class="Subhead"><strong>ಜೀವನಕ್ಕೂ ಅನುಕೂಲ</strong></p>.<p>ಹಾಸ್ಟೆಲ್ಗಳಲ್ಲಿ ಸರ್ಕಾರದಿಂದ ಉಚಿತವಾಗಿ ಕಲಿಯುವ ಕಲೆಯು ವಿದ್ಯಾರ್ಥಿನಿಯರ ಮುಂದಿನ ಜೀವನದಲ್ಲೂ ಪ್ರಯೋಜನಕ್ಕೆ ಬರಲಿದೆ.</p>.<p><em>–ಉಮಾ ಸಾಲಿಗೌಡರ, ಜಂಟಿ ನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>