ಮುಖ್ಯಅತಿಥಿಯಾಗಿದ್ದ ಬೆಂಗಳೂರಿನ ವಿಪ್ರೋ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೀವ ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಸೃಜನಶೀಲತೆ ಹಾಗೂ ಕೌಶಲ ಬೆಳೆಸಿಕೊಳ್ಳಬೇಕು. ಕಂಪನಿಗಳು ಬಯಸುವ ಯೋಜನೆಗಳಲ್ಲಿ ಕೆಲಸ ಮಾಡಲು ಸಿದ್ಧರಾಗಬೇಕು. ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.