<p><strong>ಬೆಳಗಾವಿ</strong>: ಇಲ್ಲಿನ ನೆಹರೂ ನಗರದಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)– ರಾಷ್ಟ್ರೀಯ ಪಾರಂಪರಿಕ ಔಷಧಿ ಸಂಸ್ಥೆಯ ನಿರ್ದೇಶಕ ಡಾ.ದೇಬಪ್ರಸಾದ್ ಚಟ್ಟೋಪಾಧ್ಯಾಯ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸನ್ಮಾನಿಸಿ ಶನಿವಾರ ಬೀಳ್ಕೊಡಲಾಯಿತು.</p>.<p>ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಐಸಿಎಂಆರ್-ಎನ್ಐಟಿಎಂ ಕೇಂದ್ರದಲ್ಲಿ ಕೋವಿಡ್ ಪ್ರಯೋಗಾಲಯದ ಮೂಲಕ ತ್ವರಿತವಾಗಿ ವರದಿಗಳನ್ನು ನೀಡುವ ಮೂಲಕ ನಿಯಂತ್ರಣ ಕ್ರಮಗಳಿಗೆ ನೆರವಾದರು’ ಎಂದು ಸ್ಮರಿಸಿದರು.</p>.<p>ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ,‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಅತ್ಯಂತ ಒತ್ತಡದ ಮಧ್ಯೆಯೂ ಕೋವಿಡ್ ಪರೀಕ್ಷಾ ವರದಿಯನ್ನು ಸಕಾಲದಲ್ಲಿ ನೀಡಲು ಚಟ್ಟೋಪಾಧ್ಯಾಯ ಸಹಕರಿಸಿದರು’ ಎಂದು ನೆನೆದರು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಡಿಎಚ್ಒ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ನೆಹರೂ ನಗರದಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)– ರಾಷ್ಟ್ರೀಯ ಪಾರಂಪರಿಕ ಔಷಧಿ ಸಂಸ್ಥೆಯ ನಿರ್ದೇಶಕ ಡಾ.ದೇಬಪ್ರಸಾದ್ ಚಟ್ಟೋಪಾಧ್ಯಾಯ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸನ್ಮಾನಿಸಿ ಶನಿವಾರ ಬೀಳ್ಕೊಡಲಾಯಿತು.</p>.<p>ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಐಸಿಎಂಆರ್-ಎನ್ಐಟಿಎಂ ಕೇಂದ್ರದಲ್ಲಿ ಕೋವಿಡ್ ಪ್ರಯೋಗಾಲಯದ ಮೂಲಕ ತ್ವರಿತವಾಗಿ ವರದಿಗಳನ್ನು ನೀಡುವ ಮೂಲಕ ನಿಯಂತ್ರಣ ಕ್ರಮಗಳಿಗೆ ನೆರವಾದರು’ ಎಂದು ಸ್ಮರಿಸಿದರು.</p>.<p>ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ,‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಅತ್ಯಂತ ಒತ್ತಡದ ಮಧ್ಯೆಯೂ ಕೋವಿಡ್ ಪರೀಕ್ಷಾ ವರದಿಯನ್ನು ಸಕಾಲದಲ್ಲಿ ನೀಡಲು ಚಟ್ಟೋಪಾಧ್ಯಾಯ ಸಹಕರಿಸಿದರು’ ಎಂದು ನೆನೆದರು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಡಿಎಚ್ಒ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>