‘ಸಹಕಾರದಿಂದ ಸಮೃದ್ಧಿ ಎನ್ನುವುದನ್ನು ಸಾಕಾರಗೊಳಿಸಲು ಕ್ರಮ ವಹಿಸಲಾಗಿದೆ. ಇದು ಸಹಕಾರಿ ಆಂದೋಲನ ಬಲಪಡಿಸಲು ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿಗಳನ್ನು ಒದಗಿಸುತ್ತದೆ. ಇದರೊಂದಿಗೆ, ಸಮುದಾಯ ಆಧಾರಿತ ಅಭಿವೃದ್ಧಿ ಸಹಭಾಗಿತ್ವಕ್ಕೆ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. ಪ್ರತ್ಯೇಕ ಸಚಿವರ ನೇಮಕವಾಗುವುದರಿಂದಾಗಿ ಕ್ಷೇತ್ರವು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.