<p><strong>ನಿಪ್ಪಾಣಿ(ಬೆಳಗಾವಿ ಜಿಲ್ಲೆ):</strong> ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.</p><p>ಸ್ಥಳೀಯ ನಿವಾಸಿ ಜಬಿನ್ ಮಕಾನದಾರ(58), ಚಿಕ್ಕೋಡಿ ತಾಲ್ಲೂಕಿನ ಖಡಕಲಾಟದ ಗಣಪತಿ ಮಾನೆ(45), ರೇಖಾ ಗಾಡಿವಡ್ಡರ(35), ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಪಟ್ಟಣಕೋಡೊಲಿಯ ದಿಲದಾರ್ ಮುಲ್ಲಾ(61) ಮೃತರು.</p><p>ಇದೇ ಘಟನೆಯಲ್ಲಿ ಗಾಯಗೊಂಡ 4 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>‘ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಕಂಟೇನರ್ ಘಟ್ಟದಿಂದ ಇಳಿಯುತ್ತಿದ್ದಂತೆ ನಿಯಂತ್ರಣ ತಪ್ಪಿ, ರಸ್ತೆಯ ಎರಡೂ ಬದಿಯಲ್ಲಿದ್ದ ತಲಾ ಎರಡು ಕಾರು, ಲಾರಿ ಮತ್ತು ಒಂದು ಬೈಕ್ಗೆ ಗುದ್ದಿದೆ. ಆಗ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ' </p><p>ಎಂದು ಪೊಲೀಸರು ತಿಳಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ(ಬೆಳಗಾವಿ ಜಿಲ್ಲೆ):</strong> ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.</p><p>ಸ್ಥಳೀಯ ನಿವಾಸಿ ಜಬಿನ್ ಮಕಾನದಾರ(58), ಚಿಕ್ಕೋಡಿ ತಾಲ್ಲೂಕಿನ ಖಡಕಲಾಟದ ಗಣಪತಿ ಮಾನೆ(45), ರೇಖಾ ಗಾಡಿವಡ್ಡರ(35), ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಪಟ್ಟಣಕೋಡೊಲಿಯ ದಿಲದಾರ್ ಮುಲ್ಲಾ(61) ಮೃತರು.</p><p>ಇದೇ ಘಟನೆಯಲ್ಲಿ ಗಾಯಗೊಂಡ 4 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>‘ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಕಂಟೇನರ್ ಘಟ್ಟದಿಂದ ಇಳಿಯುತ್ತಿದ್ದಂತೆ ನಿಯಂತ್ರಣ ತಪ್ಪಿ, ರಸ್ತೆಯ ಎರಡೂ ಬದಿಯಲ್ಲಿದ್ದ ತಲಾ ಎರಡು ಕಾರು, ಲಾರಿ ಮತ್ತು ಒಂದು ಬೈಕ್ಗೆ ಗುದ್ದಿದೆ. ಆಗ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ' </p><p>ಎಂದು ಪೊಲೀಸರು ತಿಳಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>