‘ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ್ದೇವು. ಈ ರೀತಿಯ ತಪಾಸಣೆ ಅಭಿಯಾನವನ್ನು ನಿರಂತರವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು. ಕಳಪೆ ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತಬಾಂಧವರಿಗೆ ಕೃಷಿ ಪರಿಕರಗಳ ಗುಣಮಟ್ಟದ ಬಗ್ಗೆ ಸಂಶಯ ಬಂದಲ್ಲಿ ಕೃಷಿ ಇಲಾಖೆಗೆ ದೂರು ನೀಡಬಹುದು’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ತಿಳಿಸಿದ್ದಾರೆ.