ತನಿಖೆಗೆ ತಂಡ ರಚನೆ:ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ, ‘ಪತ್ತೆಯಾದ ಭ್ರೂಣಗಳು ಗರ್ಭಪಾತ ಮಾಡಿ ತೆಗೆದವು. ಭ್ರೂಣಲಿಂಗ ಪತ್ತೆ ಮಾಡಿದ ನಂತರ ಇಂಥ ಕೃತ್ಯ ಎಸಗಲಾಗಿದೆ. ತಕ್ಷಣಕ್ಕೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಭ್ರೂಣಗಳನ್ನು ಏಕೆ ಹತ್ಯೆ ಮಾಡಲಾಗಿದೆ, ಎಲ್ಲಿಂದ ತರಲಾಗಿದೆ, ಯಾವಾಗ ಹಳ್ಳಕ್ಕೆ ಎಸೆಯಲಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು’ ಎಂದರು.