ಬೆಳಗಾವಿ ಅಪಘಾತ: ಶವಗಳನ್ನು ಊರಿನತ್ತ ಒಯ್ದ ಸಂಬಂಧಿಗಳು, ನಿಲ್ಲದ ಆಕ್ರಂದನ

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟ ಏಳು ಜನರ ಮರಣೋತ್ತರ ಪರೀಕ್ಷೆ ಭಾನುವಾರ ಸಂಜೆಗೆ ಮುಕ್ತಾಯವಾಗಿದ್ದು. ಕುಟುಂಬಸ್ಥರು ತಮ್ಮ ಊರುಗಳಿಗೆ ಶವಗಳನ್ನು ತೆಗೆದುಕೊಂಡು ಹೋದರು.
ಇಲ್ಲಿನ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಶವಗಳನ್ನು ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.
ಇದನ್ನೂ ಓದಿ: ಬೆಳಗಾವಿ ಅಪಘಾತ: 'ಮೊದಲ ದಿನ ಕೆಲಸಕ್ಕೆ ಹೋದ ಮಗ ಮಸಣ ಸೇರಿದ..!'
ಕೊನೆಯ ಬಾರಿ ಮುಖ ನೋಡಲು ಶವಾಗಾರದ ಮುಂದೆ ಸೇರಿದ ಗ್ರಾಮಸ್ಥರು, ಕುಟುಂಬಸ್ಥರು, ಸ್ನೇಹಿತರು ಇನ್ನಿಲ್ಲದಂತೆ ಗೋಗರೆದರು.
ಬೆಳಗಾವಿ ಅಪಘಾತ: ಶವಗಳನ್ನು ಊರಿನತ್ತ ಒಯ್ದ ಸಂಬಂಧಿಗಳು, ನಿಲ್ಲದ ಆಕ್ರಂದನ#belagavi #roadaccident pic.twitter.com/44WaWoh1ib
— Prajavani (@prajavani) June 26, 2022
ಆಸ್ಪತ್ರೆ ಮುಂಭಾಗದಲ್ಲಿ ರಸ್ತೆ ಮೇಲೆ ಬಿದ್ದು ಹೊರಳಾಡಿದ ಮಹಿಳೆಯರನ್ನು ಸಮಾಧಾನ ಮಾಡಲು ಪೊಲೀಸರು, ಆಸ್ಪತ್ರೆ ಸಿಬ್ಬಂದಿ ಪರದಾಡಿದರು.
ಬಳಿಕ ಆಸ್ಪತ್ರೆ ಸಿಬ್ಬಂದಿ ಶವಗಳನ್ನು ಆಂಬುಲೆನ್ಸ್ ನಲ್ಲಿ ಹಾಕಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಏಳು ಕಾರ್ಮಿಕರು ಸ್ಥಳದಲ್ಲೇ ಸಾವು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.