<p><strong>ಬೆಳಗಾವಿ:</strong> ‘ಮಧುರವಾದ ಮಾತುಗಳ ಮೂಲಕವೇ ಪ್ರತಿಯೊಬ್ಬರ ಮನಸ್ಸನ್ನು ಪರಿವರ್ತನೆ ಮಾಡಿ ಧರ್ಮ ಕಟ್ಟುವ ಕೆಲಸವನ್ನು ಮಾಡಿದ ಶಂಕರಾಚಾರ್ಯರು ಭಾರತದ ಇತಿಹಾಸದಲ್ಲಿ ಧ್ರುವನಕ್ಷತ್ರದಂತೆ ಪ್ರಕಾಶಮಾನರಾಗಿರುವ ಮಹಾಪುರುಷರಲ್ಲಿ ಪ್ರಮುಖರು’ ಎಂದು ಜಿ.ಆರ್. ಕುಲಕರ್ಣಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಪಾಲಿಕೆ ವತಿಯಿಂದ ಗುರುವಾರ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ನಡೆದ ಶಂಕರಾಚಾರ್ಯರ ಜಯಂತಿ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>‘ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನ ತತ್ವಶಾಸ್ತ್ರದ ಇತಿಹಾಸದಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯುವ ಹೆಸರು ಶಂಕರಚಾರ್ಯರದು. ಪ್ರಾಚೀನ ಕಾಲದಲ್ಲಿ ಪ್ರಯಾಣ ಮಾಡುವುದು ಅತಿ ಕಷ್ಟಕರವಾದ ಕೆಲಸವಾಗಿದ್ದಾಗ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಂಚರಿಸಿ ಜನಮನ ಗೆದ್ದರು’ ಎಂದು ಸ್ಮರಿಸಿದರು.</p>.<p>ಉದ್ಘಾಟಿಸಿದ ಉಪವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಮಾತನಾಡಿ, ‘ಬ್ರಹ್ಮಸೂತ್ರವನ್ನು ಬರೆದ ಮಹಾನ್ ದಿವ್ಯಪುರುಷ ಶಂಕರಾಚಾರ್ಯರು’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಮುಂದಿನ ಬಾರಿ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಿ, ಅವರ ವಿಚಾರಧಾರೆಗಳನ್ನು ಹೆಚ್ಚು ಜನರಿಗೆ ತಲುಪಿಸಲಾಗುವುದು’ ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸೀಬಿರಂಗಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಉಪನಿರ್ದೇಶಕ ಗುರುನಾಥ ಕಡಬೂರ, ಬಿ.ಆರ್. ಪಾಟೀಲ ಇದ್ದರು.</p>.<p>ಶ್ರೀರಂಗ ಜೋಶಿ ನಾಡಗೀತೆ ಹಾಡಿದರು. ನೆಹರೂ ಯುವ ಕೇಂದ್ರದ ನಿವೃತ್ತ ಅಧಿಕಾರಿ ಎಸ್.ಯು. ಜಮಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಧುರವಾದ ಮಾತುಗಳ ಮೂಲಕವೇ ಪ್ರತಿಯೊಬ್ಬರ ಮನಸ್ಸನ್ನು ಪರಿವರ್ತನೆ ಮಾಡಿ ಧರ್ಮ ಕಟ್ಟುವ ಕೆಲಸವನ್ನು ಮಾಡಿದ ಶಂಕರಾಚಾರ್ಯರು ಭಾರತದ ಇತಿಹಾಸದಲ್ಲಿ ಧ್ರುವನಕ್ಷತ್ರದಂತೆ ಪ್ರಕಾಶಮಾನರಾಗಿರುವ ಮಹಾಪುರುಷರಲ್ಲಿ ಪ್ರಮುಖರು’ ಎಂದು ಜಿ.ಆರ್. ಕುಲಕರ್ಣಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಪಾಲಿಕೆ ವತಿಯಿಂದ ಗುರುವಾರ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ನಡೆದ ಶಂಕರಾಚಾರ್ಯರ ಜಯಂತಿ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>‘ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನ ತತ್ವಶಾಸ್ತ್ರದ ಇತಿಹಾಸದಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯುವ ಹೆಸರು ಶಂಕರಚಾರ್ಯರದು. ಪ್ರಾಚೀನ ಕಾಲದಲ್ಲಿ ಪ್ರಯಾಣ ಮಾಡುವುದು ಅತಿ ಕಷ್ಟಕರವಾದ ಕೆಲಸವಾಗಿದ್ದಾಗ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಂಚರಿಸಿ ಜನಮನ ಗೆದ್ದರು’ ಎಂದು ಸ್ಮರಿಸಿದರು.</p>.<p>ಉದ್ಘಾಟಿಸಿದ ಉಪವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಮಾತನಾಡಿ, ‘ಬ್ರಹ್ಮಸೂತ್ರವನ್ನು ಬರೆದ ಮಹಾನ್ ದಿವ್ಯಪುರುಷ ಶಂಕರಾಚಾರ್ಯರು’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಮುಂದಿನ ಬಾರಿ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಿ, ಅವರ ವಿಚಾರಧಾರೆಗಳನ್ನು ಹೆಚ್ಚು ಜನರಿಗೆ ತಲುಪಿಸಲಾಗುವುದು’ ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸೀಬಿರಂಗಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಉಪನಿರ್ದೇಶಕ ಗುರುನಾಥ ಕಡಬೂರ, ಬಿ.ಆರ್. ಪಾಟೀಲ ಇದ್ದರು.</p>.<p>ಶ್ರೀರಂಗ ಜೋಶಿ ನಾಡಗೀತೆ ಹಾಡಿದರು. ನೆಹರೂ ಯುವ ಕೇಂದ್ರದ ನಿವೃತ್ತ ಅಧಿಕಾರಿ ಎಸ್.ಯು. ಜಮಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>