ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

Last Updated 1 ಸೆಪ್ಟೆಂಬರ್ 2020, 11:33 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ ನಿವಾಸಿ ಆಯುಕ್ತ ಗುರುನೀತ್ ತೇಜ್, ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT