ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ವೈ.ಎಸ್. ಪಾಟೀಲ ಮಾತನಾಡಿ, ‘ಶರಣರು ಸ್ತ್ರೀಯರಿಗೆ ಸಮಾನತೆ ಕಲ್ಪಿಸಿದರು. ಸಮಾಜದ ಹಲವು ಸ್ತರಗಳಲ್ಲಿ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಿದರು. ಸಮಾಜದ ಸಂಘಟನೆಯಲ್ಲಿ ಮಹಿಳೆಯರ ಅಗತ್ಯತೆ ನದಟ್ಟು ಮಾಡಿದರು. ಇಂದು ಮಹಿಳೆಯರು ಸಾಕಷ್ಟು ಸಾಧನೆಯ ಶಿಖರಕ್ಕೇರಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ನವ ಸಮಾಜ ನಿರ್ಮಾಣ ಮಾಡಬೇಕಾಗಿದೆ’ ಎಂದರು.