<p><strong>ಅಥಣಿ: </strong>‘ಮಹಿಳೆಯರ ಮುಂದೆ ಸಾಕಷ್ಟು ಸವಾಲುಗಳಿವೆ. ಅವುಗಳಿಗೆ ನಾವೇ ಉತ್ತರ ನೀಡಬೇಕಾಗಿದೆ. ಇದಕ್ಕೆ ಆತ್ಮಬಲ ಅತ್ಯಗತ್ಯವಾಗಿದೆ’ ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು.</p>.<p>ಇಲ್ಲಿನ ಮೋಟಗಿ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ ಉತ್ಸವದ ನಡೆದ ಮುಕ್ತಾಯಿ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆ ಬೆಳೆಯುತಿದ್ದಂತೆಯೇ ಶ್ರೀಮಂತಿಕೆ, ವೈಭವೀಕರಣದ ಬೆನ್ನು ಹತ್ತಿದ ವಿದ್ಯಾವಂತರು ಜೀವನವನ್ನು ಕೇವಲ ಹಣದಿಂದ ಅಳೆಯುತ್ತಿದ್ದೇವೆ. ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿದ್ದೇವೆ. ಇದು ಬದುಕಿನ ಸರಿಯಾದ ಕ್ರಮವಲ್ಲ’ ಎಂದರು.</p>.<p>‘ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಯಾವುದೇ ಪ್ರದೇಶದ ಒಂದಿಂಚನ್ನೂ ಮಹಾರಾಷ್ಟ್ರದವರು ಪಡೆಯುವುದಕ್ಕೆ ಆಗುವುದಿಲ್ಲ. ಕನ್ನಡಿಗರು ಯಾವಾಗಲೂ ಒಗ್ಗಟ್ಟನ್ನು ಬಿಟ್ಟವರಲ್ಲ’ ಎಂದು ಹೇಳಿದರು.</p>.<p>ಇಳಕಲ್ಲದ ಗುರುಮಹಾಂತ ಸ್ವಾಮೀಜಿ, ಅಗಡಿಯ ಅಕ್ಕಿಮಠ ಗುರುಲಿಂಗ ಸ್ವಾಮೀಜಿ, ಚಿಂತಕಿ ಡಾ.ಮೀನಾಕ್ಷಿ ಬಾಳಿ ಮಾತನಾಡಿದರು.</p>.<p>ಮೋಟಗಿ ಮಠದ ಅಧ್ಯಕ್ಷ ಪ್ರಭುಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈ ಮಹಿಳೆಯರಿಗೆ ಮುಕ್ತಾಯಿ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಸವ ಕಲ್ಯಾಣದ ಬಸವ ತತ್ವ ಪ್ರಸಾರಕಿ ಅಕ್ಕ ಗಂಗಾಬಿಕಾ, ಸುಮಿತ್ರಾ ಕುಮಠಳ್ಳಿ, ಸಿ.ಸಿ. ಹೇಮಲತಾ, ವಿದ್ಯಾ ಭಜಂತ್ರಿ, ಕೃತಿಕಾ ಜಂಗಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: </strong>‘ಮಹಿಳೆಯರ ಮುಂದೆ ಸಾಕಷ್ಟು ಸವಾಲುಗಳಿವೆ. ಅವುಗಳಿಗೆ ನಾವೇ ಉತ್ತರ ನೀಡಬೇಕಾಗಿದೆ. ಇದಕ್ಕೆ ಆತ್ಮಬಲ ಅತ್ಯಗತ್ಯವಾಗಿದೆ’ ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು.</p>.<p>ಇಲ್ಲಿನ ಮೋಟಗಿ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ ಉತ್ಸವದ ನಡೆದ ಮುಕ್ತಾಯಿ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆ ಬೆಳೆಯುತಿದ್ದಂತೆಯೇ ಶ್ರೀಮಂತಿಕೆ, ವೈಭವೀಕರಣದ ಬೆನ್ನು ಹತ್ತಿದ ವಿದ್ಯಾವಂತರು ಜೀವನವನ್ನು ಕೇವಲ ಹಣದಿಂದ ಅಳೆಯುತ್ತಿದ್ದೇವೆ. ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿದ್ದೇವೆ. ಇದು ಬದುಕಿನ ಸರಿಯಾದ ಕ್ರಮವಲ್ಲ’ ಎಂದರು.</p>.<p>‘ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಯಾವುದೇ ಪ್ರದೇಶದ ಒಂದಿಂಚನ್ನೂ ಮಹಾರಾಷ್ಟ್ರದವರು ಪಡೆಯುವುದಕ್ಕೆ ಆಗುವುದಿಲ್ಲ. ಕನ್ನಡಿಗರು ಯಾವಾಗಲೂ ಒಗ್ಗಟ್ಟನ್ನು ಬಿಟ್ಟವರಲ್ಲ’ ಎಂದು ಹೇಳಿದರು.</p>.<p>ಇಳಕಲ್ಲದ ಗುರುಮಹಾಂತ ಸ್ವಾಮೀಜಿ, ಅಗಡಿಯ ಅಕ್ಕಿಮಠ ಗುರುಲಿಂಗ ಸ್ವಾಮೀಜಿ, ಚಿಂತಕಿ ಡಾ.ಮೀನಾಕ್ಷಿ ಬಾಳಿ ಮಾತನಾಡಿದರು.</p>.<p>ಮೋಟಗಿ ಮಠದ ಅಧ್ಯಕ್ಷ ಪ್ರಭುಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈ ಮಹಿಳೆಯರಿಗೆ ಮುಕ್ತಾಯಿ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಸವ ಕಲ್ಯಾಣದ ಬಸವ ತತ್ವ ಪ್ರಸಾರಕಿ ಅಕ್ಕ ಗಂಗಾಬಿಕಾ, ಸುಮಿತ್ರಾ ಕುಮಠಳ್ಳಿ, ಸಿ.ಸಿ. ಹೇಮಲತಾ, ವಿದ್ಯಾ ಭಜಂತ್ರಿ, ಕೃತಿಕಾ ಜಂಗಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>