ಬೆಳಗಾವಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಇತರ ನಾಯಕರು ಕರ್ನಾಟಕದೊಂದಿಗೆ ಕಾಲು ಕೆರೆದು ಜಗಳ ತೆಗೆಯುತ್ತಿರುವ ನಡುವೆಯೇ, ಆ ರಾಜ್ಯದ ರಸ್ತೆ ಸಾರಿಗೆ ನಿಗಮವು ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಅಧಿಕೃತವಾಗಿಯೇ ‘ಧಮ್ಕಿ ಪತ್ರ’ವೊಂದನ್ನು ಈಚೆಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.