<p><strong>ಬೆಳಗಾವಿ:</strong> ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗೆ ಶಿವಸೇನೆಯವರು 'ಜೈ ಮಹಾರಾಷ್ಟ್ರ' ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.</p>.ಕೊಲ್ಹಾಪುರದಲ್ಲಿ ಕರ್ನಾಟಕದ ಬಸ್ ಮೇಲೆ 'ಜೈ ಮಹಾರಾಷ್ಟ್ರ' ಸ್ಟಿಕ್ಕರ್.<p>ಬೆಳಗಾವಿಯಲ್ಲಿ ಎಂಇಎಸ್ ನವರು ಮಹಾಮೇಳಾವ್ ನಡೆಸಲು ಮುಂದಾಗಿದ್ದರು. ಇದಕ್ಕೆ ಜಿಲ್ಲಾಡಳಿತ ಅನುಮತಿ ಕೊಡದ ಕಾರಣ, ಕೊಲ್ಹಾಪುರದಲ್ಲಿ ಶಿವಸೇನೆಯವರು ಪುಂಡಾಟಿಕೆ ಮೆರೆದಿದ್ದರು. ಈಗ ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಿಸಲು ಯತ್ನಿಸುತ್ತಿರುವ ಹಿನ್ಮೆಲೆಯಲ್ಲಿ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಬಳಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ತಡೆಯುವಂತೆ ಪೊಲೀಸರು ಸೂಚಿಸಿದ ಕಾರಣ, ಸಾರಿಗೆ ಸಂಸ್ಥೆ ಅಧಿಕಾರಿಗಳು ಈ ಕ್ರಮ ವಹಿಸಿದ್ದಾರೆ.</p>.ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕರವೇ ಕಾರ್ಯಕರ್ತರು ವಶಕ್ಕೆ.<p>'ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಬಸ್ ಗಳು ನಿಪ್ಪಾಣಿಯವರೆಗೆ ಹೋಗಿ ವಾಪಸಾಗುತ್ತಿವೆ' ಎಂದು ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ 'ಪ್ರಜಾವಾಣಿ'ಗೆ ತಿಳಿಸಿದರು.</p> .ಬೆಳಗಾವಿ: ಬೇಸಿಗೆಯಲ್ಲಾದರೂ ಸೌಧದಿಂದ ನೀರು ಕೊಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗೆ ಶಿವಸೇನೆಯವರು 'ಜೈ ಮಹಾರಾಷ್ಟ್ರ' ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.</p>.ಕೊಲ್ಹಾಪುರದಲ್ಲಿ ಕರ್ನಾಟಕದ ಬಸ್ ಮೇಲೆ 'ಜೈ ಮಹಾರಾಷ್ಟ್ರ' ಸ್ಟಿಕ್ಕರ್.<p>ಬೆಳಗಾವಿಯಲ್ಲಿ ಎಂಇಎಸ್ ನವರು ಮಹಾಮೇಳಾವ್ ನಡೆಸಲು ಮುಂದಾಗಿದ್ದರು. ಇದಕ್ಕೆ ಜಿಲ್ಲಾಡಳಿತ ಅನುಮತಿ ಕೊಡದ ಕಾರಣ, ಕೊಲ್ಹಾಪುರದಲ್ಲಿ ಶಿವಸೇನೆಯವರು ಪುಂಡಾಟಿಕೆ ಮೆರೆದಿದ್ದರು. ಈಗ ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಿಸಲು ಯತ್ನಿಸುತ್ತಿರುವ ಹಿನ್ಮೆಲೆಯಲ್ಲಿ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಬಳಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ತಡೆಯುವಂತೆ ಪೊಲೀಸರು ಸೂಚಿಸಿದ ಕಾರಣ, ಸಾರಿಗೆ ಸಂಸ್ಥೆ ಅಧಿಕಾರಿಗಳು ಈ ಕ್ರಮ ವಹಿಸಿದ್ದಾರೆ.</p>.ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕರವೇ ಕಾರ್ಯಕರ್ತರು ವಶಕ್ಕೆ.<p>'ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಬಸ್ ಗಳು ನಿಪ್ಪಾಣಿಯವರೆಗೆ ಹೋಗಿ ವಾಪಸಾಗುತ್ತಿವೆ' ಎಂದು ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ 'ಪ್ರಜಾವಾಣಿ'ಗೆ ತಿಳಿಸಿದರು.</p> .ಬೆಳಗಾವಿ: ಬೇಸಿಗೆಯಲ್ಲಾದರೂ ಸೌಧದಿಂದ ನೀರು ಕೊಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>