<p><strong>ಬೆಳಗಾವಿ</strong>: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬುಧವಾರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>‘ಶಿವಾಜಿ ಮಹಾರಾಜ್ ಕೀ ಜೈ, ಜೈ ಶಿವಾಜಿ–ಜೈ ಭವಾನಿ’ ಎಂಬ ಘೋಷಣೆಗಳ ಮಧ್ಯೆ ಆರಂಭವಾದ ಮೆರವಣಿಗೆ ನೋಡುಗರ ಕಣ್ಮನ ಸೆಳೆಯಿತು. ಶಿವಾಜಿಯ ಇತಿಹಾಸ ಸಾರುವ ಕಲಾಕೃತಿಗಳು, ವಾಧ್ಯಮೇಳಗಳು, ದೇಸಿ ಸೊಗಡಿನ ಢೋಲ-ತಾಷಾ, ಝಾಂಜ್ ಪಥಕಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.</p>.<p>ವಿವಿಧ ಬಡಾವಣೆಗಳ ಸಂಘ ಹಾಗೂ ಮಂಡಳಿಗಳು ರೂಪಕಗಳು ಶಿವಾಜಿಯ ಚರಿತ್ರೆ ಕಟ್ಟಿಕೊಟ್ಟವು. ಯುವಕ-ಯುವತಿಯರ ಮಂಡಳದವರು, ಮಹಿಳಾ ಸಂಘ-ಸಂಸ್ಥೆಗಳು ವಿವಿಧ ಪಾತ್ರಧಾರಿಗಳು ಕಿರುನಾಟಕಗಳನ್ನು ಪ್ರದರ್ಶಿಸಿ ನೋಡುಗರ ಮೆಚ್ಚುಗೆ ಗಳಿಸಿದರು. ಶಿವಾಜಿಯ ಬಾಲ್ಯ, ಶಿಕ್ಷಣ, ಯುದ್ಧ ಕಲೆ, ಪಟ್ಟಾಭಿಷೇಕ, ಕೋಟೆಗಳನ್ನು ಗೆದ್ದು ರಾಜ್ಯಭಾರ ಮಾಡಿರುವ ಪ್ರಸಂಗಗಳು, ರಾಜತಾಂತ್ರಿಕತೆ ಹೀಗೆ ವಿವಿಧ ಸನ್ನಿವೇಶಗಳನ್ನು ಬಿಂಬಿಸುವ ನಾಟಕಗಳು ಪ್ರದರ್ಶನಗೊಂಡವು.</p>.<p><strong>ಮೆರವಣಿಗೆಗೆ ಚಾಲನೆ:</strong></p>.<p>ರವಿವಾರ ಪೇಟೆಯಲ್ಲಿ ಸಂಸದ ಸುರೇಶ ಅಂಗಡಿ ಚಾಲನೆ ನೀಡಿದರು. ಶಿವಾಜಿ ಮಹಾರಾಜರ ಪಲ್ಲಕ್ಕಿಗೆ ಪೂಜೆ ಸಲ್ಲಿಸಿ, ಆರತಿ ಮಾಡಿ, ಭಕ್ತಿಗೀತೆಗಳನ್ನು ಹಾಡಲಾಯಿತು. ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಈ ಬಾರಿ 100 ವರ್ಷ ಪೂರೈಸಿದ್ದ ಹಿನ್ನೆಲೆಯಲ್ಲಿ ದೊಡ್ಡಮಟ್ಟದಲ್ಲಿ ಮೆರವಣಿಗೆ ನಡೆಯಿತು.</p>.<p>ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ, ಡಿಸಿಪಿ ಸೀಮಾ ಲಾಟ್ಕರ್, ಶಿವಾಜಿ ಉತ್ಸವ ಮಂಡಳಿ ಅಧ್ಯಕ್ಷ ದೀಪಕ ದಳವಿ, ಮುಖಂಡರಾದವಿಕಾಸ ಕಲಘಟಗಿ, ಕಿರಣ ಜಾಧವ, ಸರಿತಾ ಪಾಟೀಲ, ಪ್ರಕಾಶ ಶಿರೋಳಕರ ಭಾಗವಹಿಸಿದ್ದರು.</p>.<p>ನಗರದಾದ್ಯಂತ ಹಾಗೂ ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಅಧಿಕಾರಿಗಳು ದ್ವಿಚಕ್ರವಾಹನಗಳಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿ, ಸ್ಥಳೀಯರಿಗೆ ಧೈರ್ಯ ತುಂಬಿದರು.</p>.<p>ಮೆರವಣಿಗೆ, ರೂಪಕಗಳನ್ನು ವೀಕ್ಷಿಸಲು ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ತಡರಾತ್ರಿವರೆಗೂ ಮೆರವಣಿಗೆ ಮುಂದುವರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬುಧವಾರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>‘ಶಿವಾಜಿ ಮಹಾರಾಜ್ ಕೀ ಜೈ, ಜೈ ಶಿವಾಜಿ–ಜೈ ಭವಾನಿ’ ಎಂಬ ಘೋಷಣೆಗಳ ಮಧ್ಯೆ ಆರಂಭವಾದ ಮೆರವಣಿಗೆ ನೋಡುಗರ ಕಣ್ಮನ ಸೆಳೆಯಿತು. ಶಿವಾಜಿಯ ಇತಿಹಾಸ ಸಾರುವ ಕಲಾಕೃತಿಗಳು, ವಾಧ್ಯಮೇಳಗಳು, ದೇಸಿ ಸೊಗಡಿನ ಢೋಲ-ತಾಷಾ, ಝಾಂಜ್ ಪಥಕಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು.</p>.<p>ವಿವಿಧ ಬಡಾವಣೆಗಳ ಸಂಘ ಹಾಗೂ ಮಂಡಳಿಗಳು ರೂಪಕಗಳು ಶಿವಾಜಿಯ ಚರಿತ್ರೆ ಕಟ್ಟಿಕೊಟ್ಟವು. ಯುವಕ-ಯುವತಿಯರ ಮಂಡಳದವರು, ಮಹಿಳಾ ಸಂಘ-ಸಂಸ್ಥೆಗಳು ವಿವಿಧ ಪಾತ್ರಧಾರಿಗಳು ಕಿರುನಾಟಕಗಳನ್ನು ಪ್ರದರ್ಶಿಸಿ ನೋಡುಗರ ಮೆಚ್ಚುಗೆ ಗಳಿಸಿದರು. ಶಿವಾಜಿಯ ಬಾಲ್ಯ, ಶಿಕ್ಷಣ, ಯುದ್ಧ ಕಲೆ, ಪಟ್ಟಾಭಿಷೇಕ, ಕೋಟೆಗಳನ್ನು ಗೆದ್ದು ರಾಜ್ಯಭಾರ ಮಾಡಿರುವ ಪ್ರಸಂಗಗಳು, ರಾಜತಾಂತ್ರಿಕತೆ ಹೀಗೆ ವಿವಿಧ ಸನ್ನಿವೇಶಗಳನ್ನು ಬಿಂಬಿಸುವ ನಾಟಕಗಳು ಪ್ರದರ್ಶನಗೊಂಡವು.</p>.<p><strong>ಮೆರವಣಿಗೆಗೆ ಚಾಲನೆ:</strong></p>.<p>ರವಿವಾರ ಪೇಟೆಯಲ್ಲಿ ಸಂಸದ ಸುರೇಶ ಅಂಗಡಿ ಚಾಲನೆ ನೀಡಿದರು. ಶಿವಾಜಿ ಮಹಾರಾಜರ ಪಲ್ಲಕ್ಕಿಗೆ ಪೂಜೆ ಸಲ್ಲಿಸಿ, ಆರತಿ ಮಾಡಿ, ಭಕ್ತಿಗೀತೆಗಳನ್ನು ಹಾಡಲಾಯಿತು. ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಈ ಬಾರಿ 100 ವರ್ಷ ಪೂರೈಸಿದ್ದ ಹಿನ್ನೆಲೆಯಲ್ಲಿ ದೊಡ್ಡಮಟ್ಟದಲ್ಲಿ ಮೆರವಣಿಗೆ ನಡೆಯಿತು.</p>.<p>ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ, ಡಿಸಿಪಿ ಸೀಮಾ ಲಾಟ್ಕರ್, ಶಿವಾಜಿ ಉತ್ಸವ ಮಂಡಳಿ ಅಧ್ಯಕ್ಷ ದೀಪಕ ದಳವಿ, ಮುಖಂಡರಾದವಿಕಾಸ ಕಲಘಟಗಿ, ಕಿರಣ ಜಾಧವ, ಸರಿತಾ ಪಾಟೀಲ, ಪ್ರಕಾಶ ಶಿರೋಳಕರ ಭಾಗವಹಿಸಿದ್ದರು.</p>.<p>ನಗರದಾದ್ಯಂತ ಹಾಗೂ ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಅಧಿಕಾರಿಗಳು ದ್ವಿಚಕ್ರವಾಹನಗಳಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿ, ಸ್ಥಳೀಯರಿಗೆ ಧೈರ್ಯ ತುಂಬಿದರು.</p>.<p>ಮೆರವಣಿಗೆ, ರೂಪಕಗಳನ್ನು ವೀಕ್ಷಿಸಲು ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ತಡರಾತ್ರಿವರೆಗೂ ಮೆರವಣಿಗೆ ಮುಂದುವರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>