ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ. ಕಲ್ಯಾಣ್ ಪತ್ನಿ ಹಾಗೂ ಕುಟುಂಬದವರಿಗೆ ಹಣ ವರ್ಗಾವಣೆ: ಆರೋಪಿ ಪೊಲೀಸರ ವಶಕ್ಕೆ

Last Updated 8 ಅಕ್ಟೋಬರ್ 2020, 4:10 IST
ಅಕ್ಷರ ಗಾತ್ರ

ಬೆಳಗಾವಿ: ಚಲನಚಿತ್ರ ಗೀತರಚನೆಕಾರ ಕೆ. ಕಲ್ಯಾಣ್ ಪತ್ನಿ ಹಾಗೂ ಕುಟುಂಬದವರಿಗೆ ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಶಿವಾನಂದ ವಾಲಿ ಅವರನ್ನು ಇಲ್ಲಿನ ಜೆಎಂಎಫ್ ನ್ಯಾಯಾಲಯ ಅ.12ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.

ಹೆಚ್ಚಿನ ವಿಚಾರಣೆಗೆ ಒಳಪಡಿಸುವುದಕ್ಕಾಗಿ ಮಾಳಮಾರುತಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ನ್ಯಾಯಾಲಯ ಇದನ್ನು ‍ಪುರಸ್ಕರಿಸಿದೆ. ಆರೋಪಿಯನ್ನು ಪೊಲೀಸರು ಭಾನುವಾರ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇನ್‌ಸ್ಪೆಕ್ಟರ್‌ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಈ ನಡುವೆ, ಆರೋಪಿ ಪರ ವಕೀಲರಿಂದ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆಯನ್ನು ಅ.12ಕ್ಕೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT