ಗೋಕಾಕ: ಇಲ್ಲಿನ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ– ಮಂಥನ ವೇದಿಕೆ ಆಶ್ರಯದಲ್ಲಿ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಅವರ 50ನೇ ಜನ್ಮದಿನ ಹಾಗೂ 154ನೇ ಶಿವಾನುಭವಗೋಷ್ಠಿ ಕಾರ್ಯಕ್ರಮ ಜೂನ್ 24ರಂದು ಸಂಜೆ 6ಕ್ಕೆ ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆಯಲಿದೆ.
ಸ್ವಾಮೀಜಿ ಅವರ ಜನ್ಮದಿನ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಹಾಗೂ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಸಾನ್ನಿಧ್ಯವನ್ನು ನದಿ ಇಂಗಳಗಾಂವ ಗ್ರಾಮದ ಗುರುಲಿಂಗ ದೇವರಮಠದ ಸಿದ್ಧಲಿಂಗ ಸ್ವಾಮೀಜಿ ವಹಿಸುವರು. ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲಅಧ್ಯಕ್ಷತೆ ವಹಿಸುವರು.ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆಯ ಅಧ್ಯಕ್ಷ ಡಾ.ಸಿ.ಕೆ.ನಾವಲಗಿ ಅವರುಮುರುಘರಾಜೇಂದ್ರ ಸ್ವಾಮಿಗಳ ಕುರಿತು ಮಾತನಾಡುವರು. ಕಾರ್ಯಕ್ರಮದ ನಂತರ ಶ್ರೀಗಳಿಗೆ ಭಕ್ತಾಧಿಗಳಿಂದ ಸತ್ಕಾರ ಜರುಗಲಿವೆ.
ಮಠದ ಸಮಸ್ತ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ-ಮಂಥನ ವೇದಿಕೆ ಮುಖಂಡರು ಪ್ರಕಟಣೆ ಮೂಲಕ ಕೋರಿದ್ದಾರೆ.