ಅಥಣಿ ಮೂಲದವರಾದ ಅವರು, ಸೇಂಟ್ ಫಾಲ್ ಮತ್ತು ಕೆಎಲ್ಇ ಸಂಸ್ಥೆಯ ಜಿ.ಎ. ಹೈಸ್ಕೂಲಿನಲ್ಲಿ ಶಾರೀರಿಕ ಶಿಕ್ಷಣ ಮತ್ತು ವಿಜ್ಞಾನ ಬೋಧಕರಾಗಿ ಸೇವೆ ಸಲ್ಲಿಸಿದ್ದರು. ‘ಕ್ರೀಡಾಂಗಣ’ ಮಾಸಪತ್ರಿಕೆ ಸಂಪಾದಕರಾಗಿ, ಉದಯ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. 1960ರಲ್ಲಿ ತೆರೆಕಂಡ ‘ಸಂಗೊಳ್ಳಿ ರಾಯಣ್ಣ’ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.