<p><strong>ರಾಮದುರ್ಗ:</strong> ಕುತೂಹಲ ಕೆರಳಿಸಿದ್ದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ನೇತೃತ್ವದ ಬಣ ಸತತ ನಾಲ್ಕನೇ ಬಾರಿಗೆ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದೆ. </p>.<p>ಭಾನುವಾರ ತಡರಾತ್ರಿವರೆಗೂ ಮತಎಣಿಕೆ ನಡೆಯಿತು. ಕಾರ್ಖಾನೆಯ 18 ಸ್ಥಾನಗಳಲ್ಲಿ ಮಹಾದೇವಪ್ಪ ಯಾದವಾಡ ನೇತೃತ್ವದ ಬಣ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಪ್ರತಿಸ್ಪರ್ಧಿ ಬಿ.ಬಿ.ಹಿರೇರಡ್ಡಿ ರೈತ ಸಹಕಾರಿ ಬಣ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. </p>.<p>ಕಳೆದ ಅವಧಿಯಲ್ಲಿ ನಿರ್ದೇಶಕರಾಗಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಅಧ್ಯಕ್ಷ ಮಲ್ಲಣ್ಣ ಯಾದವಾಡ, ಉಪಾಧ್ಯಕ್ಷ ಬಸನಗೌಡ ದ್ಯಾಮನಗೌಡ್ರ, ಈರಪ್ಪ ಹರನಟ್ಟಿ, ಬಸವರಾಜ ತುಪ್ಪದ, ಮಹಾದೇವ ಆತಾರ, ಶಶಿಕಲಾ ಸೋಮಗೊಂಡ, ಅನ್ನಪೂರ್ಣಾ ಪಾಟೀಲ, ಚಂದ್ರು ರಜಪೂತ, ಪುನರಾಯ್ಕೆಯಾದರು.</p>.<p>ಭೀಮಪ್ಪ ಬೆಳವಣಕಿ, ಶಿವಾನಂದ ಮುಷ್ಠಿಗೇರಿ (ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಪೆನೆಲ್), ಬಸವರಾಜ ಹಿರೇರಡ್ಡಿ ಗೋಪಾಲರಡ್ಡಿ ಸಂಶಿ, ಪರುತಗೌಡ ಪಾಟೀಲ, ಪರಪ್ಪಗೌಡ ಪಾಟೀಲ, ಈರಣ್ಣ ಕಾಮನ್ನವರ, ಭೀಮಪ್ಪ ಬಸಿಡೋಣಿ, ಬಸಪ್ಪ ಸಿದರಡ್ಡಿ (ಬಿ.ಬಿ.ಹಿರೇರಡ್ಡಿ ಪೆನೆಲ್) ಆಯ್ಕೆಯಾದರು.</p>.<p>ಕಳೆದ ಅವಧಿಯಲ್ಲಿ ನಿರ್ದೇಶಕರಾಗಿದ್ದ ಅಡಿವೆಪ್ಪ ಸುರಗ, ಶಂಕರಗೌಡ ಪಾಟೀಲ, ಶ್ರೀನಿವಾಸ ಕರದಿನ, ದುಂಡಪ್ಪ ದೇವರಡ್ಡಿ ಮತ್ತು ಬಾಳಪ್ಪ ಹಂಜಿ ಈ ಚುನಾವಣೆಯಲ್ಲಿ ಪರಾಭವಗೊಂಡರು.</p>.<p>ಮಧ್ಯರಾತ್ರಿಯೇ ಅಭಿಮಾನಿಗಳು ತಮ್ಮ ನಾಯಕರರೊಂದಿಗೆ ವಿಜಯೋತ್ಸವ ಆಚರಿಸಿದರು. ಪಟ್ಟಣದ ಕ್ರಾಸ್ಗಳಲ್ಲಿ ಪಟಾಕಿ ಸಿಡಿಸಿ ಸಂತಸಪಟ್ಟರು.</p>.<p>ಚುನಾವಣಾಧಿಕಾರಿಯಾಗಿ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಕಾರ್ಯ ನಿರ್ವಹಿಸಿದ್ದರು. ಡಿಎಸ್ಪಿ ಚಿದಂಬರ ಮಡಿವಾಳರ, ಸಿಪಿಐ ವಿನಾಯಕ ಬಡಿಗೇರ ಸೂಕ್ತ ಪೊಲೀಸ್ ಬಂದೋಬಸ್ತ್ ನೆರವೇರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಕುತೂಹಲ ಕೆರಳಿಸಿದ್ದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ನೇತೃತ್ವದ ಬಣ ಸತತ ನಾಲ್ಕನೇ ಬಾರಿಗೆ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದೆ. </p>.<p>ಭಾನುವಾರ ತಡರಾತ್ರಿವರೆಗೂ ಮತಎಣಿಕೆ ನಡೆಯಿತು. ಕಾರ್ಖಾನೆಯ 18 ಸ್ಥಾನಗಳಲ್ಲಿ ಮಹಾದೇವಪ್ಪ ಯಾದವಾಡ ನೇತೃತ್ವದ ಬಣ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಪ್ರತಿಸ್ಪರ್ಧಿ ಬಿ.ಬಿ.ಹಿರೇರಡ್ಡಿ ರೈತ ಸಹಕಾರಿ ಬಣ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತು. </p>.<p>ಕಳೆದ ಅವಧಿಯಲ್ಲಿ ನಿರ್ದೇಶಕರಾಗಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಅಧ್ಯಕ್ಷ ಮಲ್ಲಣ್ಣ ಯಾದವಾಡ, ಉಪಾಧ್ಯಕ್ಷ ಬಸನಗೌಡ ದ್ಯಾಮನಗೌಡ್ರ, ಈರಪ್ಪ ಹರನಟ್ಟಿ, ಬಸವರಾಜ ತುಪ್ಪದ, ಮಹಾದೇವ ಆತಾರ, ಶಶಿಕಲಾ ಸೋಮಗೊಂಡ, ಅನ್ನಪೂರ್ಣಾ ಪಾಟೀಲ, ಚಂದ್ರು ರಜಪೂತ, ಪುನರಾಯ್ಕೆಯಾದರು.</p>.<p>ಭೀಮಪ್ಪ ಬೆಳವಣಕಿ, ಶಿವಾನಂದ ಮುಷ್ಠಿಗೇರಿ (ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಪೆನೆಲ್), ಬಸವರಾಜ ಹಿರೇರಡ್ಡಿ ಗೋಪಾಲರಡ್ಡಿ ಸಂಶಿ, ಪರುತಗೌಡ ಪಾಟೀಲ, ಪರಪ್ಪಗೌಡ ಪಾಟೀಲ, ಈರಣ್ಣ ಕಾಮನ್ನವರ, ಭೀಮಪ್ಪ ಬಸಿಡೋಣಿ, ಬಸಪ್ಪ ಸಿದರಡ್ಡಿ (ಬಿ.ಬಿ.ಹಿರೇರಡ್ಡಿ ಪೆನೆಲ್) ಆಯ್ಕೆಯಾದರು.</p>.<p>ಕಳೆದ ಅವಧಿಯಲ್ಲಿ ನಿರ್ದೇಶಕರಾಗಿದ್ದ ಅಡಿವೆಪ್ಪ ಸುರಗ, ಶಂಕರಗೌಡ ಪಾಟೀಲ, ಶ್ರೀನಿವಾಸ ಕರದಿನ, ದುಂಡಪ್ಪ ದೇವರಡ್ಡಿ ಮತ್ತು ಬಾಳಪ್ಪ ಹಂಜಿ ಈ ಚುನಾವಣೆಯಲ್ಲಿ ಪರಾಭವಗೊಂಡರು.</p>.<p>ಮಧ್ಯರಾತ್ರಿಯೇ ಅಭಿಮಾನಿಗಳು ತಮ್ಮ ನಾಯಕರರೊಂದಿಗೆ ವಿಜಯೋತ್ಸವ ಆಚರಿಸಿದರು. ಪಟ್ಟಣದ ಕ್ರಾಸ್ಗಳಲ್ಲಿ ಪಟಾಕಿ ಸಿಡಿಸಿ ಸಂತಸಪಟ್ಟರು.</p>.<p>ಚುನಾವಣಾಧಿಕಾರಿಯಾಗಿ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಕಾರ್ಯ ನಿರ್ವಹಿಸಿದ್ದರು. ಡಿಎಸ್ಪಿ ಚಿದಂಬರ ಮಡಿವಾಳರ, ಸಿಪಿಐ ವಿನಾಯಕ ಬಡಿಗೇರ ಸೂಕ್ತ ಪೊಲೀಸ್ ಬಂದೋಬಸ್ತ್ ನೆರವೇರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>