ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹ ಶಾಸಕ ಶ್ರೀಮಂತ ಪಾಟೀಲಗೆ ಘೇರಾವ್‌ ಹಾಕಿದ ರೈತರು

Last Updated 4 ಅಕ್ಟೋಬರ್ 2019, 14:44 IST
ಅಕ್ಷರ ಗಾತ್ರ

ದರೂರ (ಬೆಳಗಾವಿ ಜಿಲ್ಲೆ): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೆರೆ ಸಂತ್ರಸ್ತರಿಗೆ ಪರಿಹಾರದ ಚೆಕ್‌ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಅನರ್ಹ ಶಾಸಕ ಶ್ರೀಮಂತ ಪಾಟೀಲ ಅವರಿಗೆ ಗ್ರಾಮದ ಬಸ್‌ ನಿಲ್ದಾಣದ ಬಳಿ ರೈತರು ಘೇರಾವ್‌ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

‘ನಿಮ್ಮ ಮೇಲೆ ವಿಶ್ವಾಸವಿಟ್ಟು ಜನ ಆಯ್ಕೆ ಮಾಡಿ ಕಳಿಸಿದ್ದರು. ಆದರೆ, ವೈಯಕ್ತಿಕ ಹಿತಾಸಕ್ತಿಗಾಗಿ ರಾಜೀನಾಮೆ ನೀಡಿದೀರಿ. ಆಗ ಹೋದವರು ಈಗ ಬಂದಿದ್ದೀರಿ ನಾಚಿಕೆಯಾಗುವುದಿಲ್ಲವೇ? ಆಯ್ಕೆ ಮಾಡಿದ ಜನರಿಗೆ ಮೋಸ ಮಾಡಲು ಹೇಗೆ ಮನಸ್ಸು ಬಂತು. ಮೋಸಗಾರರಿಗೆ ಇಲ್ಲೇನು ಕೆಲಸ. ನೀವು ಇಲ್ಲಿಂದ ಹೊರಡಿ’ ಎಂದು ರೈತ ಸಂಘದ ಜಿಲ್ಲಾ ಉಪಾದ್ಯಕ್ಷ ಎ.ಬಿ.ಹಳ್ಳೂರ ಒತ್ತಾಯಿಸಿದರು.

‘ನಿಮ್ಮ ಸಕ್ಕರೆ ಕಾರ್ಖಾನೆಯು ರೈತರಿಗೆ ಸರಿಯಾಗಿ ಬಿಲ್ ಪಾವತಿಸುತ್ತಿಲ್ಲ. ರೈತರ ಬಗ್ಗೆ ನಿಮಗಿರುವ ಕಾಳಜಿಯನ್ನು ಇದು ತೋರಿಸುತ್ತದೆ. ಈ ಸಲ ನೀವು ಪುನಃ ಆಯ್ಕೆಯಾಗುವುದಿಲ್ಲ. ಮತದಾರರು ನಿಮಗೆ ಪಾಠ ಕಲಿಸುವುದು ಖಚಿತ’ ಎಂದರು.

ಮುಖಂಡರಾದ ಪ್ರಕಾಶ ಪುಜಾರಿ, ಯಶೋಧರ ನೆಮ್ಮನ್ನವರ, ಭರತೇಶ ಗುಂಡವಾಡೆ, ದಶರಥ ನಾಯಿಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT