‘ಅವರು ತಾಲ್ಲೂಕಿನ ಯಡೂರದಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಯ ಸೇವಾ ಸಿಬ್ಬಂದಿಗೂ ಕೋವಿಡ್ ದೃಢಪಟ್ಟಿದೆ. ಇತ್ತೀಚೆಗೆ ತಮ್ಮ ಮತ್ತು ಸಿಬ್ಬಂದಿ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದ್ದಾರೆ’ ಎಂದು ಮಠದ ಪ್ರಕಟಣೆ ತಿಳಿಸಿದೆ.