‘ಸಿದ್ದರಾಮಯ್ಯರಂತಹ ನೂರು ಜನ ಬಂದರೂ ಬಿಜೆಪಿಯು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ’ ಎಂಬ ಯಡಿಯೂರಪ್ಪ ಹೇಳಿಕೆಗೆ, ‘ಅವರು ಅಹಂಕಾರದ ಮಾತನಾಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಮ್ಮೆಯಾದರೂ ಬಿಜೆಪಿ ಸರಳ ಬಹುಮತ ಪಡೆದು ಸರ್ಕಾರ ರಚಿಸಿದೆಯೇ? ಆಪರೇಷನ್ ಕಮಲದ ಮೂಲಕ ಸರ್ಕಾರ ಮಾಡಿದ್ದಾರೆ’ ಎಂದು ತಿರುಗೇಟು ನೀಡಿದರು.