ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಒಳಜಗಳ ಬೀದಿಗೆ ಬಂದಿದೆ. ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ ಎಂಬ ದುರಹಂಕಾರದಿಂದ ಸಿದ್ದರಾಮಯ್ಯ ಓಡಾಡುತ್ತಿದ್ದಾರೆ. ಅವರನ್ನು ಕಾಂಗ್ರೆಸ್ನಿಂದ ಹೊರ ಹಾಕಲು ಡಿ.ಕೆ. ಶಿವಕುಮಾರ್ ಮೊದಲಾದ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿದ್ದಾರೆ. ನಾನಿಲ್ಲದ ಕಾಂಗ್ರೆಸ್ ಉಳಿಯಬಾರದು ಎನ್ನುವುದು ಸಿದ್ದರಾಮಯ್ಯ ಯೋಚನೆಯಾಗಿದೆ. ಹೀಗಾಗಿ, ಡಿಕೆಶಿ ಅಧ್ಯಕ್ಷರಾಗಿದ್ದಾಗ ಯಾವುದೇ ಉಪ ಚುನಾವಣೆ ಗೆಲ್ಲಬಾರದು ಎಂದು ನೋಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.