ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿಗೆ ಹೆಲಿಕಾಪ್ಟರಲ್ಲಿ ಡ್ರಾಪ್ ಕೊಟ್ಟ ಸಿದ್ದರಾಮಯ್ಯ

Last Updated 20 ಅಕ್ಟೋಬರ್ 2021, 14:06 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಜಿಲ್ಲೆಯ ಗೋಕಾಕಕ್ಕೆ ಹೆಲಿಕಾಪ್ಟರ್‌ನಲ್ಲಿ ಬುಧವಾರ ಡ್ರಾಪ್ ನೀಡಿದ್ದಾರೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ತಮ್ಮೊಂದಿಗೆ ಸತೀಶ ಜಾರಕಿಹೊಳಿ ಅವರನ್ನೂ ಕರೆದುಕೊಂಡು ಬಂದಿದ್ದರು. ಹೆಲಿಕಾಪ್ಟರ್‌‌ಅನ್ನು ಗೋಕಾಕದ ಡಾಲರ್ಸ್‌ ಕಾಲೊನಿಯ ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಮಾಡಿಸಿ ಇಳಿಸಿ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದ್ದಾರೆ.

ಸತೀಶ ಬೆಂಬಲಿಗರು ಮಾಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT