‘ರಾಷ್ಟ್ರೀಯ ಅಹಾರ ಭದ್ರತಾ ಕಾಯ್ದೆ 2013ರ ಅನ್ವಯ ಬಡತನ ರೇಖೆಗಿಂತ ಕೆಳಗಿರುವ ಪ್ರತಿ ಸದಸ್ಯನಿಗೆ 5 ಕೆ.ಜಿ. ಹಾಗೂ ಅತಿ ಕಡು ಬಡವರು ಹೊಂದುವ ಅಂತ್ಯೋದಯ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ಚೀಟಿಗೆ 35 ಕೆ.ಜಿ. ಆಹಾರಧಾನ್ಯ ವಿತರಿಸಲಾಗುತ್ತಿದೆ. ರಾಜ್ಯದಲ್ಲಿ 10,87,576 ಅಂತ್ಯೋದಯ (ಅನ್ನಭಾಗ್ಯ) ಪಡಿತರ ಚೀಟಿ ಹಾಗೂ 1,16,62,365 ಬಿಪಿಎಲ್ ಪಡಿತರ ಚೀಟಿಗಳಿವೆ. ಒಟ್ಟು 4,37,42,623 ಫಲಾನುಭವಿಗಳಿದ್ದಾರೆ. ನಾನು ಸಚಿವನಾದ ನಂತರ ಭೌಗೋಳಿಕ ಆಹಾರ ಪದ್ಧತಿಗೆ ಅನುಗುಣವಾಗಿ ಜನರ ಆರೋಗ್ಯದ ದೃಷ್ಟಿಯಿಂದ ಅಕ್ಕಿಯೊಂದಿಗೆ ರಾಗಿ ಹಾಗೂ ಜೋಳ ಕೊಡಲು ನಿರ್ಧರಿಸಲಾಗಿದೆ. ಅದನ್ನು ಬೆಂಬಲ ಬೆಲೆ ಯೋಜನೆಯಲ್ಲಿ ರಾಜ್ಯದ ರೈತರಿಂದಲೇ ಖರೀದಿಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.