‘ದೇಶದಲ್ಲಿ ಕಾಂಗ್ರೆಸ್ ಅವಸಾನದ ಅಂಚಿನಲ್ಲಿದ್ದು, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಹುದ್ದೆ ನೀಡಿದ್ದರೆ, ದಲಿತ ನಾಯಕರನ್ನು ಗುರುತಿಸಿದೆ ಎನ್ನಬಹುದಿತ್ತು. ಈಗ ಆ ಹುದ್ದೆಗೇರಲು ಯಾರೂ ಸಿದ್ಧರಿಲ್ಲ. ಪಕ್ಷವೂ ನೆಲೆ ಕಳೆದುಕೊಂಡಿದ್ದರಿಂದ ಸ್ಥಾನ ನೀಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.