ಬೆಳಗಾವಿ: ಜಿಲ್ಲೆಯ ಘಟಪ್ರಭಾದಲ್ಲಿ ಶುಕ್ರವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇವಾದಳದ ಸ್ಥಾಪಕ ಎನ್.ಎಸ್. ಹರ್ಡೀಕರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಹರ್ಡೀಕರ್ ಅವರು ವಾಸ್ತವ್ಯವಿದ್ದ ನಿವಾಸವನ್ನೂ ಸಿದ್ದರಾಮಯ್ಯ ವೀಕ್ಷಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಮಹಾಂತೇಶ ಕೌಜಲಗಿ ಇದ್ದರು.