ಎಂಇಎಸ್ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಯಾರಿಗೆ ಅನ್ಯಾಯವಾದರೂ ಪ್ರತಿಭಟಿಸುವ ಹಕ್ಕಿದೆ. ಹಾಗಾಗಿ ಕನ್ನಡ ಸಂಘಟನೆಗಳಿಗೆ ಪ್ರತಿಭಟನೆಗೆ ಅವಕಾಶ ನೀಡಬೇಕು. ಎಂಇಎಸ್ ನವರು ಪುಂಡರು. ಅವರಿಗೆ ಕಾನೂನು ಇಲ್ಲದಂತಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.