ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದೇಶ್ವರ ಸ್ವಾಮೀಜಿಗೆ ಗಾಯ: ಆಸ್ಪತ್ರೆಗೆ ದಾಖಲು

Last Updated 10 ಜನವರಿ 2022, 16:25 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದುಮ್ ಅವರ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ಮಹಾರಾಷ್ಟ್ರದ ಕನ್ಹೇರಿ ಮಠದ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ‘ಆಧ್ಯಾತ್ಮಿಕ ಪ್ರವಚನ ಸೇವಾ ಸಮಿತಿ’ಯಿಂದ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಬೆಳಿಗ್ಗೆ ಪಾಲ್ಗೊಂಡಿದ್ದರು. ಮಧ್ಯಾಹ್ನ ಕಾಗವಾಡ ತಾಲ್ಲೂಕಿನ ಶೇಡಬಾಳದ ವಿದ್ಯಾನಂದ ಮುನಿರಾಜ ಕನ್ನಡ ‍ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿದ್ಯಾನಂದ ಮುನಿರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ, ಕೇರೂರದಲ್ಲಿ ತಿಂಗಳವರೆಗೆ ಹಮ್ಮಿಕೊಂಡಿದ್ದ ಪ್ರವಚನದ ಮುಖ್ಯ ವೇದಿಕೆ ಪರಿಶೀಲಿಸಿದ್ದರು. ನಂತರ ತಮಗೆ ವಾಸ್ತವ್ಯ ಕಲ್ಪಿಸಿದ್ದ ತೋಟದ ಮನೆಗೆ ಮರಳಿದ್ದರು.

ಅವರಿಗೆ ಬಲ ಭುಜ ಹಾಗೂ ತೊಡೆಯ ಮೇಲ್ಭಾಗದ ಮೂಳೆ ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇರೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT