ಬೆಳಗಾವಿ: ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ. ಬೆಳ್ಳಿಯನ್ನು ಪೊಲೀಸರು ಕರ್ನಾಟಕ- ಮಹಾರಾಷ್ಟ್ರದ ಗಡಿ ನಿಪ್ಪಾಣಿ ಸಮೀಪದ ಕೊಗನೋಳಿಯಲ್ಲಿ ಮಂಗಳವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ರಾಜೇಂದ್ರ ಜೈನ್ ಎನ್ನುವವರು ಕೊಲ್ಹಾಪುರದಿಂದ ರಾಣೆಬೆನ್ನೂರಿಗೆ ಹೋಗುತ್ತಿದ್ದರು. ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.