<p><strong>ಬೆಳಗಾವಿ:</strong> ‘ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಇ–ಆಸ್ತಿ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆ ಸರಳೀಕರಣಗೊಳಿಸಬೇಕು. ಹಲವು ದಾಖಲೆ ಕೇಳಿ ಅಲೆದಾಡಿಸಬಾರದು’ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಪಾಟೀಲ ಒತ್ತಾಯಿಸಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೂರ್ನಾಲ್ಕು ದಾಖಲೆ ಪಡೆದು, ಎರಡ್ಮೂರು ದಿನಗಳಲ್ಲೇ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಆದರೆ, ಬೆಳಗಾವಿ ಪಾಲಿಕೆಯಲ್ಲಿ 8ರಿಂದ 10 ದಾಖಲೆ ದಾಖಲೆ ಕೇಳಿ ವಿಳಂಬ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ 2.50 ಲಕ್ಷಕ್ಕೂ ಅಧಿಕ ಆಸ್ತಿಗಳಿವೆ. ಈ ಪೈಕಿ ಈವರೆಗೆ 15 ಸಾವಿರ ಆಸ್ತಿಗಳ ಮಾಲೀಕರಿಗೆ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗಿದೆ. ತೆರಿಗೆ ಭರಿಸಿದ ರಸೀದಿ, ಸಿಟಿಎಸ್ ಸಂಖ್ಯೆ ಸೇರಿ ಕೆಲವೇ ದಾಖಲೆ ಪರಿಶೀಲಿಸಿ ಪ್ರಮಾಣಪತ್ರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸದ್ಯ ಕೆಲವರಿಗೆ ನಾಲ್ಕೇ ದಿನಗಳಲ್ಲಿ ಪ್ರಮಾಣಪತ್ರ ಸಿಕ್ಕರೆ, ಇನ್ನೂ ಕೆಲವರಿಗೆ ತಿಂಗಳಾದರೂ ಸಿಕ್ಕಿಲ್ಲ. ಪ್ರಕ್ರಿಯೆ ಚುರುಕುಗೊಳಿಸುವ ಜತೆಗೆ, ಏಜೆಂಟರ ಹಾವಳಿ ತಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಇ–ಆಸ್ತಿ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆ ಸರಳೀಕರಣಗೊಳಿಸಬೇಕು. ಹಲವು ದಾಖಲೆ ಕೇಳಿ ಅಲೆದಾಡಿಸಬಾರದು’ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಪಾಟೀಲ ಒತ್ತಾಯಿಸಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೂರ್ನಾಲ್ಕು ದಾಖಲೆ ಪಡೆದು, ಎರಡ್ಮೂರು ದಿನಗಳಲ್ಲೇ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಆದರೆ, ಬೆಳಗಾವಿ ಪಾಲಿಕೆಯಲ್ಲಿ 8ರಿಂದ 10 ದಾಖಲೆ ದಾಖಲೆ ಕೇಳಿ ವಿಳಂಬ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ 2.50 ಲಕ್ಷಕ್ಕೂ ಅಧಿಕ ಆಸ್ತಿಗಳಿವೆ. ಈ ಪೈಕಿ ಈವರೆಗೆ 15 ಸಾವಿರ ಆಸ್ತಿಗಳ ಮಾಲೀಕರಿಗೆ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗಿದೆ. ತೆರಿಗೆ ಭರಿಸಿದ ರಸೀದಿ, ಸಿಟಿಎಸ್ ಸಂಖ್ಯೆ ಸೇರಿ ಕೆಲವೇ ದಾಖಲೆ ಪರಿಶೀಲಿಸಿ ಪ್ರಮಾಣಪತ್ರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸದ್ಯ ಕೆಲವರಿಗೆ ನಾಲ್ಕೇ ದಿನಗಳಲ್ಲಿ ಪ್ರಮಾಣಪತ್ರ ಸಿಕ್ಕರೆ, ಇನ್ನೂ ಕೆಲವರಿಗೆ ತಿಂಗಳಾದರೂ ಸಿಕ್ಕಿಲ್ಲ. ಪ್ರಕ್ರಿಯೆ ಚುರುಕುಗೊಳಿಸುವ ಜತೆಗೆ, ಏಜೆಂಟರ ಹಾವಳಿ ತಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>