‘ವಿದ್ಯಾರ್ಥಿ ಜೀವನದಲ್ಲಿದ್ದಾಗ, ಎಂಜಿನಿಯರ್ ಆಗಬೇಕೆಂಬ ಆಸೆ ಇತ್ತು. ಆದರೆ, ವಿಧಿ ನನ್ನನ್ನು ಗಾಯಕನನ್ನಾಗಿ ಬೆಳೆಸಿದೆ. ಭಾರತದಲ್ಲಿ ಇರುವ 15 ಭಾಷೆಗಳಲ್ಲಿ ಹಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಬೇರೆಯವರಿಗೂ ಈ ವಿದ್ಯೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆಂಧ್ರದಲ್ಲಿ ಹುಟ್ಟಿ ಬೆಳೆದರೂ ಹಿನ್ನೆಲೆ ಗಾಯಕನಾಗಿ ಹಾಡಿದ 2ನೇ ಹಾಡೇ ಕನ್ನಡದ್ದು. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿವರೆಗೆ ಬಂದಿದೆ. ಕನ್ನಡಿಗರ ಪ್ರೀತಿ ಮರೆಯಲು ಸಾಧ್ಯವಿಲ್ಲ’ ಎಂದು ಮನದುಂಬಿ ನೆನೆದಿದ್ದರು.