<p><strong>ಬೆಳಗಾವಿ</strong>: ‘ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ಬೇರೆ ಯಾರಿಂದಲೂ ದೊರೆತಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಲ್ಲಿ ಹುಟ್ಟಲು ಬಯಸುತ್ತೇನೆ’ ಎಂದು ಖ್ಯಾತ ಹಿನ್ನಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೇಳಿದ್ದರು.</p>.<p>ಇದೇ ವರ್ಷದ ಫೆ.1ರಂದು ಜಿಲ್ಲೆಯ ಗೋಕಾಕದಲ್ಲಿ ಇಲ್ಲಿನ ಶೂನ್ಯ ಸಂಪಾದನ ಮಠದ ಕಾಯಕ ಯೋಗಿ ಲಿಂ.ಬಸವ ಸ್ವಾಮೀಜಿ ಅವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-2020 ಸಮಾರಂಭದಲ್ಲಿ ಶ್ರೀಮಠದ ವತಿಯಿಂದ ನೀಡಲಾದ ₹ 1 ಲಕ್ಷ ನಗದು ಒಳಗೊಂಡಿರುವ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದ್ದರು.</p>.<p>‘ವಿದ್ಯಾರ್ಥಿ ಜೀವನದಲ್ಲಿದ್ದಾಗ, ಎಂಜಿನಿಯರ್ ಆಗಬೇಕೆಂಬ ಆಸೆ ಇತ್ತು. ಆದರೆ, ವಿಧಿ ನನ್ನನ್ನು ಗಾಯಕನನ್ನಾಗಿ ಬೆಳೆಸಿದೆ. ಭಾರತದಲ್ಲಿ ಇರುವ 15 ಭಾಷೆಗಳಲ್ಲಿ ಹಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಬೇರೆಯವರಿಗೂ ಈ ವಿದ್ಯೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆಂಧ್ರದಲ್ಲಿ ಹುಟ್ಟಿ ಬೆಳೆದರೂ ಹಿನ್ನೆಲೆ ಗಾಯಕನಾಗಿ ಹಾಡಿದ 2ನೇ ಹಾಡೇ ಕನ್ನಡದ್ದು. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿವರೆಗೆ ಬಂದಿದೆ. ಕನ್ನಡಿಗರ ಪ್ರೀತಿ ಮರೆಯಲು ಸಾಧ್ಯವಿಲ್ಲ’ ಎಂದು ಮನದುಂಬಿ ನೆನೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ಬೇರೆ ಯಾರಿಂದಲೂ ದೊರೆತಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಲ್ಲಿ ಹುಟ್ಟಲು ಬಯಸುತ್ತೇನೆ’ ಎಂದು ಖ್ಯಾತ ಹಿನ್ನಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೇಳಿದ್ದರು.</p>.<p>ಇದೇ ವರ್ಷದ ಫೆ.1ರಂದು ಜಿಲ್ಲೆಯ ಗೋಕಾಕದಲ್ಲಿ ಇಲ್ಲಿನ ಶೂನ್ಯ ಸಂಪಾದನ ಮಠದ ಕಾಯಕ ಯೋಗಿ ಲಿಂ.ಬಸವ ಸ್ವಾಮೀಜಿ ಅವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-2020 ಸಮಾರಂಭದಲ್ಲಿ ಶ್ರೀಮಠದ ವತಿಯಿಂದ ನೀಡಲಾದ ₹ 1 ಲಕ್ಷ ನಗದು ಒಳಗೊಂಡಿರುವ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದ್ದರು.</p>.<p>‘ವಿದ್ಯಾರ್ಥಿ ಜೀವನದಲ್ಲಿದ್ದಾಗ, ಎಂಜಿನಿಯರ್ ಆಗಬೇಕೆಂಬ ಆಸೆ ಇತ್ತು. ಆದರೆ, ವಿಧಿ ನನ್ನನ್ನು ಗಾಯಕನನ್ನಾಗಿ ಬೆಳೆಸಿದೆ. ಭಾರತದಲ್ಲಿ ಇರುವ 15 ಭಾಷೆಗಳಲ್ಲಿ ಹಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಬೇರೆಯವರಿಗೂ ಈ ವಿದ್ಯೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆಂಧ್ರದಲ್ಲಿ ಹುಟ್ಟಿ ಬೆಳೆದರೂ ಹಿನ್ನೆಲೆ ಗಾಯಕನಾಗಿ ಹಾಡಿದ 2ನೇ ಹಾಡೇ ಕನ್ನಡದ್ದು. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿವರೆಗೆ ಬಂದಿದೆ. ಕನ್ನಡಿಗರ ಪ್ರೀತಿ ಮರೆಯಲು ಸಾಧ್ಯವಿಲ್ಲ’ ಎಂದು ಮನದುಂಬಿ ನೆನೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>