ಏ.20ರ ಸಂಜೆ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೋಟಿಸ್ ನೀಡಿದ್ದಾರೆ. ಖುದ್ದು ಭೇಟಿಯಾಗಿ ನೋಟಿಸ್ ತಲುಪಿಸಲು ಬಂದಿದ್ದ ಅಧಿಕಾರಿಗಳಿಗೆ ಶಾಸಕರು ಲಭ್ಯವಾಗಲಿಲ್ಲ. ಕೋವಿಡ್–19 ಕಾರಣದಿಂದ ಅವರು ಗೃಹ ಕಚೇರಿಗೆ ಬಂದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಹೀಗಾಗಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಚೇರಿಗೆ ತೆರಳಿ ನೋಟಿಸ್ ತಲುಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.