ಆಮೆ ಗತಿ ಕಾಮಗಾರಿ: ಬಡಾವಣೆಯಲ್ಲಿ ಹದಗೆಟ್ಟಿದ್ದ ರಸ್ತೆ, ಚರಂಡಿ ಪುನರ್ ನಿರ್ಮಾಣ ಕಾಮಗಾರಿ ನಡೆದಿದ್ದು, ಆಮೆ ಗತಿಯಲ್ಲಿ ಸಾಗಿದೆ. ವಾರ್ಡ್ಸದಸ್ಯ, ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಯಾವುದೆ ಅಡಚಣೆ ಇಲ್ಲದೆ ವಾಹನಗಳ ಓಡಾಟ, ಪಾದಚಾರಿಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಜನರು ಕೋರಿದ್ದರು. ಆದರೆ ಕಾಮಗಾರಿ ಮಾತ್ರ ಆಮೆವೇಗದಲ್ಲಿ ಸಾಗಿದೆ. ಇದರಿಂದ ತೊಂದರೆ ಅನುಭವಿಸುತ್ತಿದ್ದೇವೆ ಎನ್ನುತ್ತಾರೆ ಬಡಾವಣೆ ನಿವಾಸಿಗಳು.