‘ಹಿರೇತಡಸಿ ಗ್ರಾಮದಲ್ಲಿ ಸೌಲಭ್ಯಗಳು ಮರೀಚಿಕೆ’ ಶೀರ್ಷಿಕೆಯಲ್ಲಿ ಬುಧವಾರ ‘ಪ್ರಜಾವಾಣಿ’ ಪತ್ರಿಕೆಯ ಗ್ರಾಮಾಯಣ ಅಂಕಣದಲ್ಲಿ ಸುದ್ದಿ ಪ್ರಕಟಗೊಂಡ ಕಾಡಣ ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಿಶಿಷ್ಟ ಸಮುದಾಯದ ಕಾಲೊನಿಗೆ ಹೋಗುವ ರಸ್ತೆಯನ್ನು ಆವರಿಸಿಕೊಂಡಿದ್ದ ಬಳ್ಳಾರಿ ಜಾಲಿಯನ್ನು ಜೆಸಿಬಿ ಬಳಸಿ ತೆರವುಗೊಳಿಸಿದೆ. ಕೆಸರುಮಯ ರಸ್ತೆಗೆ ಮಣ್ಣು ಸುರಿದು ರಸ್ತೆ ಮೇಲೆ ನೀರು ನಿಲ್ಲದಂತೆ ಮಾಡಿಸಿದೆ.