<p><strong>ಬೆಳಗಾವಿ</strong>: ‘ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ ರೂಂ ಅಭಿವೃದ್ಧಿಪಡಿಸುವ ಯೋಜನೆ ಇದೆ. ಮೊದಲ ಹಂತದಲ್ಲಿ 20 ಶಾಲೆಗಳಲ್ಲಿ ಸಿದ್ಧವಾಗಿವೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.</p>.<p>ತಾಲ್ಲೂಕಿನ ಉಚಗಾಂವ ಹಾಗೂ ಬಿಜಗರಣಿ ಗ್ರಾಮಗಳ ಹಿರಿಯ ಪ್ರಾಥಮಿಕ ಶಾಲೆಗಳ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಸೋಮವಾರ ಉದ್ಘಾಟಸಿ ಅವರು ಮಾತನಾಡಿದರು.</p>.<p>‘ಶಾಸಕಿಯಾದ ನಂತರ ದೆಹಲಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಿ ಶಾಲೆಗಳನ್ನು ಗಮನಿಸಿದ್ದೆ. ನಮ್ಮ ಕ್ಷೇತ್ರದಲ್ಲೂ ಅದೇ ಮಾದರಿಯ ತರಗತಿ ಕೊಠಡಿಗಳನ್ನು ಮಾಡಬೇಕು ಎನ್ನುವ ಕನಸು ಹೊತ್ತು ಬಂದಿದ್ದೆ. ಅದರಂತೆ ಸಿಎಸ್ಆರ್ ನಿಧಿಯಲ್ಲಿ ಕ್ರಮ ವಹಿಸುತ್ತಿದ್ದೇನೆ’ ಎಂದರು.</p>.<p>‘ಶಿಕ್ಷಣವಿದ್ದರಷ್ಟೆ ಜನರ ಮತ್ತು ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ. ಜೊತೆಗೆ ಗುಣಮಟ್ಟದ ಶಿಕ್ಷಣವೂ ಅಗತ್ಯವಾಗಿದೆ. ನಾವು ಕಲಿಯುವಾಗ ಈ ಅವಕಾಶ ಸಿಗಲಿಲ್ಲ. ಆದರೆ, ಕ್ಷೇತ್ರದ ಮಕ್ಕಳು ಗುಣಮಟ್ಟದ ಕಲಿಕೆಯಿಂದ ವಂಚಿತ ಆಗಬಾರದು ಎನ್ನುವುದು ನನ್ನ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>‘ಕ್ಷೇತ್ರದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಬಿಇಒ ಆರ್.ಪಿ.ಜುಟ್ಟನವರ, ಮುಖಂಡರಾದ ಚನ್ನರಾಜ ಹಟ್ಟಿಹೊಳಿ, ಮನೋಹರ ಬೆಳಗಾಂವ್ಕರ, ಯಲ್ಲಪ್ಪ ಬೆಳಗಾಂವ್ಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ ರೂಂ ಅಭಿವೃದ್ಧಿಪಡಿಸುವ ಯೋಜನೆ ಇದೆ. ಮೊದಲ ಹಂತದಲ್ಲಿ 20 ಶಾಲೆಗಳಲ್ಲಿ ಸಿದ್ಧವಾಗಿವೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.</p>.<p>ತಾಲ್ಲೂಕಿನ ಉಚಗಾಂವ ಹಾಗೂ ಬಿಜಗರಣಿ ಗ್ರಾಮಗಳ ಹಿರಿಯ ಪ್ರಾಥಮಿಕ ಶಾಲೆಗಳ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಸೋಮವಾರ ಉದ್ಘಾಟಸಿ ಅವರು ಮಾತನಾಡಿದರು.</p>.<p>‘ಶಾಸಕಿಯಾದ ನಂತರ ದೆಹಲಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಿ ಶಾಲೆಗಳನ್ನು ಗಮನಿಸಿದ್ದೆ. ನಮ್ಮ ಕ್ಷೇತ್ರದಲ್ಲೂ ಅದೇ ಮಾದರಿಯ ತರಗತಿ ಕೊಠಡಿಗಳನ್ನು ಮಾಡಬೇಕು ಎನ್ನುವ ಕನಸು ಹೊತ್ತು ಬಂದಿದ್ದೆ. ಅದರಂತೆ ಸಿಎಸ್ಆರ್ ನಿಧಿಯಲ್ಲಿ ಕ್ರಮ ವಹಿಸುತ್ತಿದ್ದೇನೆ’ ಎಂದರು.</p>.<p>‘ಶಿಕ್ಷಣವಿದ್ದರಷ್ಟೆ ಜನರ ಮತ್ತು ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ. ಜೊತೆಗೆ ಗುಣಮಟ್ಟದ ಶಿಕ್ಷಣವೂ ಅಗತ್ಯವಾಗಿದೆ. ನಾವು ಕಲಿಯುವಾಗ ಈ ಅವಕಾಶ ಸಿಗಲಿಲ್ಲ. ಆದರೆ, ಕ್ಷೇತ್ರದ ಮಕ್ಕಳು ಗುಣಮಟ್ಟದ ಕಲಿಕೆಯಿಂದ ವಂಚಿತ ಆಗಬಾರದು ಎನ್ನುವುದು ನನ್ನ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>‘ಕ್ಷೇತ್ರದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಬಿಇಒ ಆರ್.ಪಿ.ಜುಟ್ಟನವರ, ಮುಖಂಡರಾದ ಚನ್ನರಾಜ ಹಟ್ಟಿಹೊಳಿ, ಮನೋಹರ ಬೆಳಗಾಂವ್ಕರ, ಯಲ್ಲಪ್ಪ ಬೆಳಗಾಂವ್ಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>