<p><strong>ಬೆಳಗಾವಿ:</strong> ‘ನೂತನ ಶಿಕ್ಷಣ ನೀತಿಯು ಬಹುಶಿಸ್ತೀಯ ಪಠ್ಯಕ್ರಮವನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಪ್ರಸ್ತುತ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಮತ್ತು ತಾಂತ್ರಿಕ ಜ್ಞಾನಾರ್ಜನೆ ಪಡೆಯುವ ಸದಾವಕಾಶ ಕಲ್ಪಿಸಿದೆ’ ಎಂದು ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.</p>.<p>ನಗರದ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ’ ಎಂದರು.</p>.<p>ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ಮಾತನಾಡಿದರು. ಮರಾಠಾ ಮಂಡಳ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಐ.ಸಿ. ಸಾವಂತ ನೌಕರರ ಕುಂದುಕೊರತೆಗಳ ಬಗ್ಗೆ ಗಮನಸೆಳೆದರು.</p>.<p>ಅಪೂರ್ವಾ ಕರಿಕಟ್ಟಿ ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಚಾರ್ಯಎಸ್.ಜಿ. ನಂಜಪ್ಪನವರ ಸ್ವಾಗತಿಸಿದರು. ಎಸ್.ಬಿ. ಬನ್ನಿಮಟ್ಟಿ ನಿರೂಪಿಸಿದರು. ಇಟಗಿ ಪಿಯು ಕಾಲೇಜಿನ ಪ್ರಾಚಾರ್ಯ ಜಿ.ಬಿ. ನಾಯ್ಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನೂತನ ಶಿಕ್ಷಣ ನೀತಿಯು ಬಹುಶಿಸ್ತೀಯ ಪಠ್ಯಕ್ರಮವನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಪ್ರಸ್ತುತ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಮತ್ತು ತಾಂತ್ರಿಕ ಜ್ಞಾನಾರ್ಜನೆ ಪಡೆಯುವ ಸದಾವಕಾಶ ಕಲ್ಪಿಸಿದೆ’ ಎಂದು ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.</p>.<p>ನಗರದ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ’ ಎಂದರು.</p>.<p>ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ಮಾತನಾಡಿದರು. ಮರಾಠಾ ಮಂಡಳ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಐ.ಸಿ. ಸಾವಂತ ನೌಕರರ ಕುಂದುಕೊರತೆಗಳ ಬಗ್ಗೆ ಗಮನಸೆಳೆದರು.</p>.<p>ಅಪೂರ್ವಾ ಕರಿಕಟ್ಟಿ ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಚಾರ್ಯಎಸ್.ಜಿ. ನಂಜಪ್ಪನವರ ಸ್ವಾಗತಿಸಿದರು. ಎಸ್.ಬಿ. ಬನ್ನಿಮಟ್ಟಿ ನಿರೂಪಿಸಿದರು. ಇಟಗಿ ಪಿಯು ಕಾಲೇಜಿನ ಪ್ರಾಚಾರ್ಯ ಜಿ.ಬಿ. ನಾಯ್ಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>