ನಾಲ್ಕನೇ ಮದ್ರಾಸ್ ಬಟಾಲಿಯನ್ದಲ್ಲಿ ಸೇವೆ ಸಲ್ಲಿಸಿದ 55 ಮಾಜಿ ಸೈನಿಕರು ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಕಾರ್ಗಿಲ್, ಪಂಜಾಬ ಸುವರ್ಣ ಸೌಧದಲ್ಲಿ ಅಡಗಿದ ಉಗ್ರರ ಸೆದೆಬಡಿದ, ಶ್ರೀಲಂಕಾ ಯುದ್ಧ, ಮೇಘಧೂತ, ಜಮ್ಮು ಕಾಶ್ಮೀರ, ಬಾಂಗ್ಲಾದೇಶ ಯುದ್ಧದಲ್ಲಿ ಭಾಗವಹಿಸಿದ ಕರ್ನಾಟಕ, ಆಂಧ್ರ ಪ್ರದೇಶ, ತಮಿಳನಾಡು, ಕೇರಳ ವೀರ ಯೋಧರು ಭಾಗಿಯಾಗಿ ತಮ್ಮ ಅನುಭವ ಹಂಚಿಕೊಂಡರು. ಹಿರೇಕುಂಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ರೀತ್ ಪರೇಡ್ನಲ್ಲಿ ಭಾಗವಹಿಸಿ ಗಮನ ಸೆಳೆದರು.