ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ: ಯೋಧ ಸಾವು- ಕೊಲೆ ಆರೋಪ

Last Updated 28 ಡಿಸೆಂಬರ್ 2021, 6:26 IST
ಅಕ್ಷರ ಗಾತ್ರ

ಸವದತ್ತಿ: ರಜೆಗೆ ಬಂದಿದ್ದ ತಾಲ್ಲೂಕಿನ ಹಿರೂರ ಗ್ರಾಮದ ಯೋಧ ಈರಪ್ಪಾ ಬಸಪ್ಪ ಪೂಜಾರಿ ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಸಹೋದರಿಯ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಕೊಡಲು ಡಿ.25 ರಂದು ಸಂಜೆ ಅವರು ತೆರಳಿದ್ದರು. ತಡರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಬೆಳಗಿನ ಜಾವ ಗ್ರಾಮದ ಹೊರ ವಲಯದಲ್ಲಿ ಅವರ ಶವ ಪತ್ತೆಯಾಗಿದೆ.

ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿ, ನಂತರ ಹಿರೂರ ಗ್ರಾಮದ ಹದ್ದಿನಲ್ಲಿರುವ ಜನತಾ ಪ್ಲಾಟ್ ಹತ್ತಿರದ ಪಾಳುಬಿದ್ದ ಬಾವಿಗೆ ಮೃತದೇಹ ಎಸೆದಿರುವ ಶಂಕೆ ಇದೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸವದತ್ತಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT