<p><strong>ಬೆಳಗಾವಿ:</strong> ತಾಲ್ಲೂಕಿನ ನಿಂಗೆನಟ್ಟಿ ಗ್ರಾಮದ ಸೈನಿಕ ರವಿ ಯಲ್ಲಮ್ಮ ತಳವಾರ (35) ಅವರು ಬುಧವಾರ ಬೆಳಿಗ್ಗೆ ನಾಗಾಲ್ಯಾಂಡ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p> <p>ರವಿ ತಳವಾರ ಅವರು ನಾಗಾಲ್ಯಾಂಡ್ನ ಅಸ್ಸಾಂ ರೈಫಲ್ಸ್ನ 41ನೇ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸೇವೆಗೆ ತೆರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಸೇನಾ ವಾಹನವು ನಾಗಾಲ್ಯಾಂಡ್ನ ಘಾಟಿಯ ಆಳವಾದ ಕಂದಕಕ್ಕೆ ಬಿದ್ದಿತು. ರವಿ ಸ್ಥಳದಲ್ಲೇ ಮೃತಪಟ್ಟರು.</p> <p>ಕಳೆದ 16 ವರ್ಷಗಳಿಂದ ಸೇನೆಯಲ್ಲಿದ್ದ ಅವರು, ಎರಡೇ ವರ್ಷಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಅವರಿಗೆ ಪತ್ನಿ ಶೀತಲ್, ಪುತ್ರಿ ಹಾಗೂ ಪುತ್ರ ಇದ್ದಾರೆ.</p> <p>‘ಸೇನಾ ವಾಹನದ ಅಪಘಾತ ಹಾಗೂ ಸೈನಿಕ ಹುತಾತ್ಮರಾಗಿರುವ ಬಗ್ಗೆ ಸೇನೆಯಿಂದ ಈವರೆಗೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ಮಾಹಿತಿ ಬರುವ ಸಾಧ್ಯತೆ ಇದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.</p>.ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ನಿಂಗೆನಟ್ಟಿ ಗ್ರಾಮದ ಸೈನಿಕ ರವಿ ಯಲ್ಲಮ್ಮ ತಳವಾರ (35) ಅವರು ಬುಧವಾರ ಬೆಳಿಗ್ಗೆ ನಾಗಾಲ್ಯಾಂಡ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p> <p>ರವಿ ತಳವಾರ ಅವರು ನಾಗಾಲ್ಯಾಂಡ್ನ ಅಸ್ಸಾಂ ರೈಫಲ್ಸ್ನ 41ನೇ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸೇವೆಗೆ ತೆರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಸೇನಾ ವಾಹನವು ನಾಗಾಲ್ಯಾಂಡ್ನ ಘಾಟಿಯ ಆಳವಾದ ಕಂದಕಕ್ಕೆ ಬಿದ್ದಿತು. ರವಿ ಸ್ಥಳದಲ್ಲೇ ಮೃತಪಟ್ಟರು.</p> <p>ಕಳೆದ 16 ವರ್ಷಗಳಿಂದ ಸೇನೆಯಲ್ಲಿದ್ದ ಅವರು, ಎರಡೇ ವರ್ಷಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಅವರಿಗೆ ಪತ್ನಿ ಶೀತಲ್, ಪುತ್ರಿ ಹಾಗೂ ಪುತ್ರ ಇದ್ದಾರೆ.</p> <p>‘ಸೇನಾ ವಾಹನದ ಅಪಘಾತ ಹಾಗೂ ಸೈನಿಕ ಹುತಾತ್ಮರಾಗಿರುವ ಬಗ್ಗೆ ಸೇನೆಯಿಂದ ಈವರೆಗೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ಮಾಹಿತಿ ಬರುವ ಸಾಧ್ಯತೆ ಇದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.</p>.ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>