<p><strong>ಬೆಳಗಾವಿ:</strong> ಇಲ್ಲಿನ ರೈತ ಗಲ್ಲಿಯಲ್ಲಿ ಮಂಗಳವಾರ, ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. </p><p>ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ (44) ಕೊಲೆಯಾದವರು.</p><p>ಮಲ್ಲಪ್ರಭಾ ನಗರದ ನಿವಾಸಿ, ಸದ್ಯ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶುಭಂ ದತ್ತಾ ಬಿರ್ಜೆ (24) ಆರೋಪಿ.</p><p>ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.</p><p><strong>ಘಟನೆ ವಿವರ:</strong> ರೇಣುಕಾ ಅವರ ಪುತ್ರಿ ಛಾಯಾ ಮತ್ತು ಶುಭಂ ಮದುವೆ ಮೂರು ವರ್ಷಗಳ ಹಿಂದೆ ನಡೆದಿದೆ. ದಂಪತಿ ಮಧ್ಯೆ ಆಗಾಗ ತಂಟೆಗಳು ನಡೆಯುತ್ತಿದ್ದವು. </p><p>ಛಾಯಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಗಳನ್ನು ಸರಿಯಾಗಿ ನೋಡಿಕೊಂಡಿಲ್ಲ ಎಂದು ರೇಣುಕಾ ಪದೇಪದೇ ತಕರಾರು ಮಾಡಿದ್ದರು.</p><p>ಸಂಕ್ರಾಂತಿ ಹಬ್ಬದ ಕಾರಣ ರೇಣುಕಾ ಅವರು ಮಗಳಿಗೆ ಬುತ್ತಿ ಕೊಡಲು ಬಂದಿದ್ದರು. ಈ ವೇಳೆ ಅತ್ತೆ- ಅಳಿಯನ ನಡುವೆ ಮಾತಿಗೆ ಮಾತು ಬೆಳೆದು, ವಿಕೋಪಕ್ಕೆ ಹೋಯಿತು. ಮನೆಯಲ್ಲಿದ್ದ ಚಾಕು ತೆಗೆದುಕೊಂಡು ರೇಣುಕಾ ಅವರ ತೊಡೆಗೆ ಚುಚ್ಚಿದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.</p>.<p><strong>ಮೂವರ ಬಂಧನ: </strong>ಕೊಲೆ ಸಂಬಂಧ ಶುಭಂ ಹಾಗೂ ಅವರ ತಂದೆ- ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದರು.ಶಹಾಪುರ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ರೈತ ಗಲ್ಲಿಯಲ್ಲಿ ಮಂಗಳವಾರ, ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. </p><p>ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ (44) ಕೊಲೆಯಾದವರು.</p><p>ಮಲ್ಲಪ್ರಭಾ ನಗರದ ನಿವಾಸಿ, ಸದ್ಯ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶುಭಂ ದತ್ತಾ ಬಿರ್ಜೆ (24) ಆರೋಪಿ.</p><p>ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.</p><p><strong>ಘಟನೆ ವಿವರ:</strong> ರೇಣುಕಾ ಅವರ ಪುತ್ರಿ ಛಾಯಾ ಮತ್ತು ಶುಭಂ ಮದುವೆ ಮೂರು ವರ್ಷಗಳ ಹಿಂದೆ ನಡೆದಿದೆ. ದಂಪತಿ ಮಧ್ಯೆ ಆಗಾಗ ತಂಟೆಗಳು ನಡೆಯುತ್ತಿದ್ದವು. </p><p>ಛಾಯಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಗಳನ್ನು ಸರಿಯಾಗಿ ನೋಡಿಕೊಂಡಿಲ್ಲ ಎಂದು ರೇಣುಕಾ ಪದೇಪದೇ ತಕರಾರು ಮಾಡಿದ್ದರು.</p><p>ಸಂಕ್ರಾಂತಿ ಹಬ್ಬದ ಕಾರಣ ರೇಣುಕಾ ಅವರು ಮಗಳಿಗೆ ಬುತ್ತಿ ಕೊಡಲು ಬಂದಿದ್ದರು. ಈ ವೇಳೆ ಅತ್ತೆ- ಅಳಿಯನ ನಡುವೆ ಮಾತಿಗೆ ಮಾತು ಬೆಳೆದು, ವಿಕೋಪಕ್ಕೆ ಹೋಯಿತು. ಮನೆಯಲ್ಲಿದ್ದ ಚಾಕು ತೆಗೆದುಕೊಂಡು ರೇಣುಕಾ ಅವರ ತೊಡೆಗೆ ಚುಚ್ಚಿದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.</p>.<p><strong>ಮೂವರ ಬಂಧನ: </strong>ಕೊಲೆ ಸಂಬಂಧ ಶುಭಂ ಹಾಗೂ ಅವರ ತಂದೆ- ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದರು.ಶಹಾಪುರ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>